ವಿಜಯಪುರ: ತಂಬಾಕು, ಪಾನಮಸಾಲಾ ಇತ್ಯಾದಿಗಳ ಮಾರಾಟ, ಬಳಕೆ ನಿಷೇಧ

0
302

ವಿಜಯಪುರ ಮೇ. 20 : ಕೋವಿಡ್-19 ರೋಗವು ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನಮಸಾಲಾ, ಜರ್ದಾ ಇತ್ಯಾದಿಗಳನ್ನು ಬಳಸಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಅದು ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನಿಮ್ಯೋನಿಯಾ ಮತ್ತು ಕೋವಿಡ್-19 ಒಬ್ಬರಿಂದೊಬ್ಬರಿಗೆ ಹರಡಲು ಕಾರಣವಾಗುವುದರಿಂದ ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಇವುಗಳನ್ನು ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.

ಬಸವನ ಬಾಗೇವಾಡಿಯಲ್ಲಿ ದಾಳಿ ನಡೆಸಿ ವಿವಿಧ ಅಂಗಡಿಗಳಲ್ಲಿರುವ ತಂಬಾಕು (ಸುಗಂಧ) ಭರಿತ ತಂಬಾಕನ್ನು ವಶಪಡಿಸಿಕೊಂಡು ಸುಮಾರು 1600 ರೂಪಾಯಿಗಳ ದಂಡ ವಿಧಿಸಿ 16 ಪ್ರಕರಣಗಳನ್ನು ದಾಖಲಿಸಲಾಗಿದೆ.
-ವಿಜಯಪುರ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಂ.ಬಿ ಬಿರಾದಾರ

ಬೀಡಿ, ಸಿಗರೇಟ್ ಸೇದುವುದರಿಂದಲೂ ಕೈಯಿಂದ ಬಾಯಿಗೆ ವೈರಸ್‍ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆಯಿರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೂ ಈ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು. ಅದರಂತೆ ಕೋವಿಡ್-19 ಸೋಂಕಿತರು ಜಗಿಯುವ ತಂಬಾಕು ಹಾಗೂ ಪಾನಮಸಾಲಾ, ಜರ್ದಾ ಇತ್ಯಾದಿಗಳನ್ನು ಬಳಸಿ ಉಗುಳುವುದರಿಂದ ಒಬ್ಬರಿಂದೊಬ್ಬರಿಗೆ ವೈರಸ್ ಹರಡುವ ಭೀತಿ ಇರುತ್ತದೆ.

ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೂ ತಂಬಾಕು ಹಾಗೂ ಪಾನ ಮಸಾಲಾ, ಜರ್ದಾ, ಖೈನಿ ಉತ್ಪನ್ನಗಳನ್ನು ವಿಜಯಪುರ ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ.

ಒಂದು ವೇಳೆ ಇದನ್ನು ಉಲ್ಲಂಘಿಸಿದ್ದಲ್ಲಿ ಸಂಬಂಧಿಸಿದವರ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆ -1857 ವಿಪತ್ತು ನಿರ್ವಹಣಾ ಕಾಯ್ದೆ 2005 , ಐಪಿಸಿ -188, 268, 269 ಮತ್ತು 270 ಸಿ.ಆರ್.ಪಿ.ಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


 

ambedkar image

LEAVE A REPLY

Please enter your comment!
Please enter your name here