ಹಾಸನ. ಮೇ.23: ಮರಗಳನ್ನೇ ತನ್ನ ಉಸಿರಾಗಿಸಿಕೊಂಡಿರುವ, ಪರಿಸರ ಕಾಳಜಿ ಹೊಂದಿರುವ ಸಾಲುಮರದ ತಿಮ್ಮಕ್ಕನವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ವಾಂತಿ, ಭೇದಿ, ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿದ್ದ ತಿಮ್ಮಕ್ಕನವರನ್ನು ಗುರುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾಲುಮರದ ತಿಮ್ಮಕ್ಕನವರ ಆರೋಗ್ಯ ಚೇತರಿಸಿದ್ದು. ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ.