ವಿಜಯಪುರ: ಗಗನಮಹಲ್ ವಾಯುವಿಹಾರಕ್ಕೆ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

0
203
ಗಗನ ಮಹಲ್

ವಿಜಯಪುರ: ನಗರದ ಗಗನ ಮಹಲ್, ಶ್ರೀ ನರಸಿಂಹ ದೇವಸ್ಥಾನ ಹಾಗೂ ಅದರ ಪಕ್ಕದಲ್ಲಿರುವ ಹೊಂಡವನ್ನು ಸ್ವಚ್ಚಗೊಳಿಸಿ ಹಿರಿಯ ನಾಗರಿಕರಿಗೆ ವಾಯುವಿಹಾರಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ಗಗನ ಮಹಲ್ ವಾಯುವಿಹಾರಿ ಸಂಘದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕಳೆದ ಏಳು ತಿಂಗಳಿನಿಂದ ಗಗನ ಮಹಲ ಮುಚ್ಚಲಾಗಿದ್ದು, ಗಗನ ಮಹಲ್ ಹಾಗೂ ನರಸಿಂಹ ದೇವಸ್ಥಾನದ ಕೋಟೆಗೆ ಹೊಂದಿಕೊಂಡ ಹೊಂಡದಲ್ಲಿ ಸ್ವಚ್ಛತೆ ಕಾರ್ಯ ಕೈಗೊಳ್ಳಬೇಕು. ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗದಂತೆ ಸ್ವಚ್ಛತೆ ಕಾರ್ಯ ಮಾಡಿಸಿ ಅಲ್ಲಿನ ನಾಗರಿಕರಿಗೆ ವಾಹುವಿಹಾರ ಮಾಡಲು ಅವಕಾಶ ಕಲ್ಪಿಸಕೊಡಬೇಕು ಎಂದು ಮನವಿಯಲ್ಲಿ ಕೇಳಿಕೊಂಡರು.

ಗಗನ ಮಹಲ್ ಉದ್ಯಾನವನದಲ್ಲಿ ಪ್ರವಾಸಿಗರಿಗೆ, ಹಿರಿಯ ನಾಗರಿಕರಿಗೆ, ಮಕ್ಕಳಿಗೆ ಅನುಕೂಲ ವಾಗುವಂತೆ ಬೆಳಿಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ 7 ಗಂಟೆಯವರೆಗೆ ವಾಹುವಿಹಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.


 

ambedkar image

LEAVE A REPLY

Please enter your comment!
Please enter your name here