ವಿಜಯಪುರ :ಫೆ 6: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟ ಎಂಬ ರಾಜ್ಯಮಟ್ಟದ ಮೂರು ದಿನಗಳ ಕಮ್ಮಟವನ್ನು ಮಾರ್ಚ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿದ್ದು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿ ಇರುವ 20 ರಿಂದ 40 ವರ್ಷ ವಯಸ್ಸುಳ್ಳ ದೇಶದ ಎಲ್ಲ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 15-02-2021 ಕೊನೆಯ ದಿನಾಂಕವಾಗಿರುತ್ತದೆ ಎಂದು ರಿಜಿಸ್ಟಾರ್ ಕರಿಯಪ್ಪ ಎನ್. ಅವರು ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ಸೈಟ್ http://karnatakasahithyaacademy.org ಇಂದ ಅರ್ಜಿ ನಮೂನೆ ಹಾಗೂ ವಿವರವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.