ಸಿಡಿ ಪ್ರಕರಣ: ರಾಜ್ಯ ಮಹಿಳಾ ಆಯೋಗ ಸಂತ್ರಸ್ಥ ಯುವತಿಯ ರಕ್ಷಣೆ

0
186

ಬೆಂಗಳೂರು ಮಾ 14: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು, ಯುವತಿ ವಿಡಿಯೋ ಹೇಳಿಕೆಯಲ್ಲಿ ತನಗೆ ಬೆದರಿಕೆ ಇರುವುದಾಗಿ, ರಕ್ಷಣೆ ನೀಡುವಂತೆ ಕೋರಿದ್ದಾಳೆ. ಅಲ್ಲದೇ ಪ್ರಕರಣದಿಂದ ತನಗೆ ಹಾಗೂ ತನ್ನ ಕುಟುಂಬ ಎದುರಿಸುತ್ತಿರುವ ನೋವು, ಸಮಸ್ಯೆ ಬಗ್ಗೆ ವಿವರಿಸಿದ್ದಾಳೆ. ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೋಟೋ ಕೇಸ್ ದಾಖಲಿಸಿಕೊಳ್ಳಲಾಗಿದ್ದು, ಯುವತಿ ಹಾಗೂ ಆಕೆಯ ಕುಟುಂಬಕ್ಕೆ ರಕ್ಷಣೆ ನೀಡಲು ಸಿದ್ಧ ಎಂದು ಹೇಳಿದ್ದಾರೆ.

ಯುವತಿ ಹಾಗೂ ಆಕೆ ಕುಟುಂಬದವರು ಧೈರ್ಯಕಳೆದುಕೊಳ್ಳಬಾರದು. ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ಎಲ್ಲವನ್ನೂ ಎದುರಿಸಬೇಕು ಎಂದು ಧೈರ್ಯ ತುಂಬಿದ್ದಾರೆ.


LEAVE A REPLY

Please enter your comment!
Please enter your name here