ಬೆಂಗಳೂರು: ವೀಕೆಂಡ್ ಕರ್ಪ್ಯೂ ವೇಳೆ ಮದ್ಯ ಮಾರಾಟಕ್ಕೆ ಅವಕಾಶ ಕೊಡದಿದ್ದರೆ ದಿನಕ್ಕೆ 75 ಕೋಟಿ ನಷ್ಟವಾಗುತ್ತದೆ. ಹೀಗಾಗಿ, ವೀಕೆಂಡ್ ಕರ್ಪೂ ವೇಳೆಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ವೀಕೆಂಡ್ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡಬಹುದಾಗಿದ್ದು, ಬೆಳಗಿನ ಅವಧಿಯಲ್ಲಿ ಮದ್ಯ ಮಾರಾಟ ಮಾಡಲು ಅವಕಾಶ ನೀಡಬಹುದು. ಹೀಗಾಗಿ ವೀಕೆಂಡ್ನಲ್ಲಿ ಕೆಲ ಸಮಯದವರೆಗೆ ಮದ್ಯ ಮಾರಾಟ ಮಾಡಲು ಅವಕಾಶ ನೀಡಬೇಕು ಎಂದು ಸಚಿವ ಗೋಪಾಲಯ್ಯ ಆಗ್ರಹಿಸಿದ್ದಾರೆ.