ವಿಜಯಪುರ: ಸರ್ಕಾರಿ ಜಾಗೆಯ ಕಟ್ಟಡದ ಪುನರ್ ರಚನೆ ಪರವಾನಿಗೆ ಪತ್ರ ನೀಡಲು 15 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸ್ರಿಗೆ ಸಿಕ್ಕಿಬಿದ್ದ ಮುದ್ದೇಬಿಹಾಳ ತಾಲೂಕಿನ ತುಂಬಗಿ ಗ್ರಾಮ ಪಂಚಾಯತಿಯ ಬಿಲ್ ಕಲೆಕ್ಟರ್ ಮಡಿವಾಳಯ್ಯ ಅಯ್ಯಣ್ಣಾ ಸಗರಮಠ ಆಪಾದಿತನನ್ನು ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.
ಇದನ್ನೂ ಓದಿ: ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ- ಸಿದ್ಧರಾಮಯ್ಯ
ಮುದ್ದೇಬಿಹಾಳ ತಾಲೂಕಿನ ಫತ್ತೆಪುರ ಗ್ರಾಮದ ದಾವಲಸಾಬ ಸಗರ ಎಂಬುವರು ದಿನಾಂಕ : 08-02-20217 ರಂದು ವಿಜಯಪುರ ಎಸಿಬಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ, ತನ್ನ ಪತ್ನಿಯ ಹೆಸರಿನಲ್ಲಿರುವ ಸರ್ಕಾರಿ ಜಾಗೆಯ ಕಟ್ಟಡ ಪರವಾನಿಗೆ ಪತ್ರ ಮಾಡಿಸಿ ಕೊಡಲು 15000 ರೂ. ಬೇಡಿಕೆ ಇಟ್ಟಿರುವ ಕುರಿತು ದೂರು ಸಲ್ಲಿಸಿದ್ದರು. ಈ ದೂರಿಯನ್ವಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಲಂಚ ಪಡೆಯುವಾಗ ಸಂದರ್ಭದಲ್ಲಿ ಆಪಾದಿತ ಬಿಲ್ ಕಲೆಕ್ಟರ್ ಮಡಿವಾಳಯ್ಯ ಅಯ್ಯಣ್ಣಾ ಸಗರಮಠನ್ನು ವಶಕ್ಕೆ ಪಡೆದುಕೊಂಡು, ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.
ಈ ತೀರ್ಪು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಮತ್ತು ಸಮಾಜದಲ್ಲಿ ಸಮಗ್ರತೆಯನ್ನು ಕಾಪಾಡಿಕೊಳ್ಳಲು ನ್ಯಾಯಾಲಯದ ಸಮರ್ಪಣೆಯನ್ನು ಒತ್ತಿಹೇಳುತ್ತದೆ. ಈ ಪ್ರಕರಣವು ಭ್ರಷ್ಟಾಚಾರವನ್ನು ಎದುರಿಸಲು ಮತ್ತು ಸಮಾಜದೊಳಗೆ ಸಮಗ್ರತೆಯನ್ನು ಕಾಪಾಡಿಕೊಳ್ಳಲು ನ್ಯಾಯಾಂಗದ ನಿರಂತರ ಪ್ರಯತ್ನಗಳನ್ನು ಎತ್ತಿ ತೋರಿಸುತ್ತದೆ. ಲಂಚದಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ದಂಡ ವಿಧಿಸುವ ಮೂಲಕ, ನ್ಯಾಯಾಲಯವು ಇದೇ ಮಾರ್ಗವನ್ನು ಅನುಸರಿಸುವುದನ್ನು ತಡೆಯುವ ಗುರಿಯನ್ನು ಹೊಂದಿದೆ. ₹ 40,000 ದಂಡವನ್ನು ವಿಧಿಸುವುದು ಶಿಕ್ಷೆಯಾಗಿ ಮಾತ್ರವಲ್ಲದೆ ಜೀವನದ ಎಲ್ಲಾ ಅಂಶಗಳಲ್ಲಿ ನೈತಿಕ ನಡವಳಿಕೆಯ ಮಹತ್ವವನ್ನು ನೆನಪಿಸುತ್ತದೆ.
ಈ ಪ್ರಕರಣ ಕುರಿತು ವಿಚಾರಣೆ ನಡೆಸಿದ ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ. ಸರ್ಕಾರದ ಪರವಾಗಿ ಕರ್ನಾಟಕ ಲೋಕಾಯುಕ್ತ ಎಸ್ಪಿಪಿ ಅರ್ಜುನ ಮಿಸಾಳೆ ಅವರು ವಾದ ಮಂಡಿಸಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಡಿ.ದೇವರಾಜ ಅರಸು: ನೊಂದವರ ನೋವಿಗೆ ಧ್ವನಿಯಾದವರು