ಬಾಗಲಕೋಟೆ: ವಿದ್ಯಾರ್ಥಿಗಳು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದರ ಮೂಲಕ (ವಿಶ್ವ ಓಝೋನ್ ದಿನಾಚರಣೆ) ಒಝೋನ್ ಪದರಿನ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕೆಂದು ತೋವಿವಿಯ ಡೀನ್ ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಜಂಟಿ ಕಾರ್ಯದರ್ಶಿ ಡಾ.ರಾಮಚಂದ್ರನ್ ನಾಯಕ ಕರೆ ನೀಡಿದರು.
ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ ಜಿಲ್ಲಾ ಬಿಜೆಪಿಯಿಂದ ಬೃಹತ ಪ್ರತಿಭಟನೆ | ಆರ್.ಎಸ್.ಪಾಟೀಲ ಕೂಚಬಾಳ
ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಭಾಭವನದಲ್ಲಿ ಹೂಲಗೇರಿ ಸರಕಾರಿ ಪ್ರೌಢಶಾಲೆ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಓಝೋನ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತೋವಿವಿಯ ಕುಲಸಚಿವ ಮಹದೇವ ಮುರಗಿ ಮಾತನಾಡಿ, ವಿದ್ಯಾರ್ಥಿಗಳು ಕಸ ವಿಲೇವಾರಿ ಬಗ್ಗೆ ಮಾಹಿತಿಯನ್ನು ಅರಿತುಕೊಂಡು ಪರಿಸರಕ್ಕೆ ಹಾನಿ ಉಂಟು ಮಾಡುವ ವಸ್ತುಗಳ ಹಾಗೂ ಪ್ಲಾಸ್ಟಿಕ್ ಉಪಯೋಗವನ್ನು ತಡೆಯುವಿಕೆಯ ಬಗ್ಗೆ ಹೆಚ್ಚಿನ ಗಮನ ವಹಿಸುವಂತೆ ತಿಳಿಸಿದರು.
ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ್ದ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯ ರಾಜೇಶ್ವರಿ ಬಾದವಾಡಗಿ ಮಾತನಾಡಿ, ಸದರಿ ಕಾರ್ಯಕ್ರಮಕ್ಕಾಗಿ ತಮ್ಮ ಶಾಲೆಯನ್ನು ಆಯ್ದುಕೊಂಡಿದ್ದಕ್ಕಾಗಿ ಉ.ಪ್ರಾ.ವಿ.ಕೇಂದ್ರ ಬಾಗಲಕೋಟೆಯ ಎಲ್ಲ ಸಿಬ್ಬಂದಿಗಳಿಗೆ ಧನ್ಯವಾದಗಳನ್ನು ತಿಳಿಸಿದರು ಹಾಗೂ ವಿದ್ಯಾರ್ಥಿಗಳಿಗೆ (ವಿಶ್ವ ಓಝೋನ್ ದಿನಾಚರಣೆ) ಓಜೋನ್ ಪದರಿನ ಮಹತ್ವವನ್ನು ವಿವರವಾಗಿ ತಿಳಿಸದರು. ಶಿಕ್ಷಕರಿ ಸವಿತಾ ಓಂಕಾರ ಮಾತನಾಡಿ, ವಿದ್ಯಾರ್ಥಿಗಳು ಸದರಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡು ಪರಿಸರದ ಸಂರಕ್ಷಣೆಯಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕೆಂದು ತಿಳಿಸಿದಿರು.
ಇದನ್ನೂ ಓದಿ: ಕನ್ನಡ ಸಾಹಿತ್ಯ ಪರಿಷತ್ತಿಗೆ ಶತಮಾನದ ಇತಿಹಾಸವಿದೆ: ಹಾಸಿಂಪೀರ ವಾಲಿಕಾರ
ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ರಸಪ್ರಶ್ನೇ ಸ್ಪರ್ಧೆಯ ವಿಜೇತರುಗಳಿಗೆ ಬಹುಮಾನವನ್ನು ವಿತರಿಸಲಾಯಿತು ಹಾಗೂ ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳಿಗೆ ಹೊರಾಂಗಣ ಮತ್ತು ಒಳಾಂಗಣ ವಿಜ್ಞಾನ ಪ್ರದರ್ಶಿಕೆಗಳ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಗಂಗನಗೌಡ ಪಾಟೀಲ, ಪ್ರೌಢಶಾಲೆಯ ಸುರೇಶ ಸಂಶಿ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಆಸೀಪ್ ಬಾಗವಾನ್ ವಂದಿಸಿದರು. ಈರಣ್ಣ ಬುಳ್ಳಾ ನಿರೂಪಿಸಿದರು.