ವಿಜಯಪುರ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ವತಿಯಿಂದ ದಿನಾಂಕ 01-10-2024 ರಂದು ಕಲಬುರಗಿಯಲ್ಲಿ “ಸಚಿವರ ಮನೆ ಚಲೋ” ಪ್ರತಿಭಟನೆ ಹಮ್ಮಿಕೊಂಡಿದೆ. ವಿಜಯಪುರ ಗ್ರಾಮ ಪಂಚಾಯತ ನೌಕರರ ಸಂಘ ಇಂದು ವಿಜಯಪೂರ ಎಪಿಎಂಸಿ ರೈತ ಸಂಘ ಭವನದಲ್ಲಿ ರಾಜ್ಯ ಸಮಿತಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು.
ರಾಜ್ಯ ಸಮಿತಿ ಅಧ್ಯಕ್ಷರಾದ ಎಂ ಬಿ ನಾಡಗೌಡ ಮಾತನಾಡಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ ರಾಜ್ಯ ಸಮಿತಿಯ ಕರೆಯ ಮೆರೆಗೆ ಗ್ರಾಮ ಪಂಚಾಯತಿ ನೌಕರರ 19 ಬೇಡಿಕೆಗಳನ್ನು ಈಡೇರಿಕೆಗಾಗಿ ಕಲಬುರಗಿಯಲ್ಲಿ ಮಾನ್ಯ ಸಚಿವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಕರ್ನಾಟಕ ಸರಕಾರ ಇವರ ಮನೆಯ ಮುಂದೆ ದಿನಾಂಕ 01-10-2024 ರ ಮಂಗಳವಾರ ರಂದು ನಡೆಯುವ ಪ್ರತಿಭಟನೆಯಲ್ಲಿ ವಿಜಯಪೂರ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ ನೌಕರರು ಭಾಗ ವಹಿಸಲು ಮತ್ತು ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಈ ಮೂಲಕ ವಿನಂತಿಸುತ್ತಿದ್ದೆವೆ ಎಂದು ಹೇಳಿದರು.
ಇದನ್ನೂ ಓದಿ: ವಿಜಯಪುರ | ಭಗತ್ ಸಿಂಗ್ರ ದೇಶ ಪ್ರೇಮ ಯುವಕರಿಗೆ ಪ್ರೇರಣೆ | ಮಲ್ಲಿಕಾರ್ಜುನ್ ಭೃಂಗಿಮಠ
ವಿಜಯಪುರ ಗ್ರಾಮ ಪಂಚಾಯತ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್. ನೀರುಗಂಟಿಗಳು, ಜನಾನ, ಸ್ವಾಹಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು. ದಿನ ನಿತ್ಯದ ಬಳಸುವ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ಕವಿಪ್ರ ವೇಶನ ರೂ. 31,000 ನಿಗಧಿಗೊಳಿಸಬೇಕು.ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ನಿವೃತ್ತಿ ಅಥವಾ ಮರಣ ಹೊಂದಿದರೆ ಅವರಿಗೆ ಪ್ರತಿ ತಿಂಗಳು, ಕನಿಷ್ಠ 50000 ಪಿಂಚನೇ ವ್ಯವಸ್ಥೆ ಜಾರಿಗೆ ಬರಬೇಕು.
ಗ್ರಾಮ ಪಂಚಾಯತಿಗಳಿಗೆ ಎರಡನೇ ಡಾಟಾ ಎಂಟ್ರಿ ಆಪರೇಟರ್ಸ್ ಹುದ್ದೆಗೆ ಅವಕಾರ ನೀಡಿದ್ದು ಸ್ವಾಗತ ಆದರೆ ಈಗಾಗಲೆ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ಗಳನ್ನು ನೇಮಕ ಮಾಡಿಕೊಂಚು ಮುಂದುವರಿಸಬೇಕು ಅಲ್ಲದೆ ಈಗಾಗಲೇ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪಾಟರ್ ಮನ್, ಜವಾದ, ಸ್ತ್ರೀಪರ್ಗಳಲ್ಲಿ ಕಂಪ್ಯೂಟರ್ ಜ್ಞಾನ ಹಾಗು ವಿದ್ಯಾರ್ಹತೆ ಹೊಂದಿದವರಿಗೆ ಅವಕಾಶ ನೀಡಬೇಕು.
ಇದನ್ನೂ ಓದಿ: ಮೇ ಸಾಹಿತ್ಯ ಬಳಗದ ವತಿಯಿಂದ ಕ್ರಾಂತಿಗೀತೆಗಳ ಕಾರ್ಯಕ್ರಮ
ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ವರ್ಗಾವಣೆಗೆ ಅವಕಾಶ ನೀಡಬೇಕು. ನೀರುಗಂಟೆಗಳಿಗೆ ಮಲ್ಟಿಪರ್ಪಸ್ ಎಂದಿರುವುದನ್ನು ಕೈಬಿಟ್ಟು ನಿರ್ದಿಷ್ಟವಾದ (ಬಾಬ್ಟಾರ್ಟ್) ಕೆಲಸಗಳನ್ನು ನಿಗದಿಪಡಿಸಬೇಕು. ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರ ಹುದ್ದೆಗಳನ್ನು ನಿಗದಿಗೊಳಿಸಬೇಕು.
ಗ್ರೇಡ್-1 ಕಾರ್ಯದರ್ಶಿ ಹುದ್ದೆಗಳಿಗೆ ಶೇಕಡ 100ರಷ್ಟು ಸ್ಥಾನಗಳನ್ನು ಗ್ರೇಡ್-2 ಕಾರ್ಯದರ್ಶಿಗಳಿಗೆ ಶೇಕಡ 70ರಷ್ಟು ದ್ವಿತೀಯ ದರ್ಜೆ ಲೆಕ್ಕ ಸಹಾಯಂ ಹುದ್ದೆಗೆ ಶೇಕಡ 50ರಷ್ಟು ಸ್ಥಾನಗಳನ್ನು ಬಡ್ತಿ ನೀಡಬೇಕು. ಅನ್ಯ ಇಲಾಖೆಯವರಿಗೆ ಬಡ್ತಿ ನೀಡಬಾರದು. ಗ್ರೇಸ್ – ಪಂಚಾಯತಿಗಳನ್ನು ಜನಸಂಖ್ಯೆಗೆ ಆಧರಿಸಿ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೆ ಏರಿಸಬೇಕು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಶೇಕಡ 60ರಷ್ಟು ಸ್ಥಾನವನ್ನು ಗ್ರೇಡ್-1 ಕಾರ್ಯದರ್ಶಿಗಳಿಗೆ ನೀಡಬೇಕು. ಐಸಿಡಿ ಸಾಲಪ್ಪ ವರದಿಯಂತೆ ಸ್ವಚ್ಛತಾಗಾರರನ್ನು ನೇಮಿಸಬೇಕು. ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಳ ಮಾಡಬೇಕು. ತೀರ್ವವಾದ ಜನಾರೋಗ್ಯಕ್ಕೆ ತುತ್ತಾದ ನೌಕರರಿಗೆ ಆಸ್ಪತ್ರೆವೆಚ್ಚ ಭರಿಸಬೇಕು. ಗ್ರೇಡ್-1 ಕಾರ್ಯದರ್ಶಿಗಳಿಂದ ಪಿ.ಡಿ.ಓ. ಹುದ್ದೆಗೆ ರಾಜ್ಯಮಟ್ಟದಲ್ಲಿ ನಡೆಯುವ ಮುಂಬಡ್ತಿಯನ್ನು ಕೈಬಿಟ್ಟು ಜಿಲ್ಲಾ ಮಟ್ಟದಲ್ಲಿ ಮುಂಬಡ್ತಿಗೆ ಅವಕಾಶ ನೀಡಬೇಕು.
ಏಲ್ ಕಲೆಕ್ಟರ್ ಮುತ್ತಾ ಗುಮಾಸ್ತ ವೃಂದದಿಂದ ಗ್ರೇಡ್-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗಳಿಗೆ ಸೇಮತಗೊಂಡ ನೌಕರರಿಗೆ ಕೆ.ಸಿ.ಎಸ್.ಆರ್. 325 ನಿಯಮಾನುಸಾರ ಹಿಂದಿನ ಸೇವೆಯನ್ನು ಪರಿಗಣಿಸಿ ಹಳ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಇ-ಹಾಜರಾತಿ ಲೋಪದೋಷಗಳನ್ನು ಪಂಚಾಯತ್ ತಂತ್ರಾಂಶದಲ್ಲಿ ಸರಿಪಡಿಸುವ ಬಗ್ಗೆ ಸಿಬ್ಬಂದಿಗಳಿಗೆ ಪೂರ್ಣ ವೇಕಿಗೆ ಪಾವತಿಸಬೇಕು.
ಇದನ್ನೂ ಓದಿ: ವಿಜಯಪುರ ಕೋರ್ಟ್ನಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ
ರಾಜ್ಯದಲ್ಲಿ ಮೊದಲನೇ ಡಾಟಾ ಎಂಟ ಆಪರೇಟರ್ಗಳಿಗೆ ಕ್ಲರ್ಕ್ ಹುದ್ದೆ ತೆರವಾದ ನಂತರ ಅನುಮೋದನೆ ನೀಡಬೇಕೆಂಬ ಷರತ್ತನ್ನು ಕೈಬಿಟ್ಟು ಅನುಮೋದನೆ ನೀಡಲು ಅವಕಾಶ ನೀಡಬೇಕು,
ಗ್ರಾಮ ಪಂಚಾಯಿತಿಗಳಲ್ಲಿ ಕಾಲಿ ಬರುವ ಎಲ್ಲಾ ವಿಭಾಗದ ಹುದ್ದೆಗಳನ್ನು ತುಂಬಬೇಕು, ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರು ಅಯ್ಯಪ್ಪ ಬಾಗೇವಾಡಿ. ಜಿಲ್ಲಾ ಉಪಾಧ್ಯಕ್ಷರಾದ ಮಲ್ಲಪ್ಪ ಚಳಗಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ವಾಲಿ. ಖಜಾಂಚಿ ಲಾಲಅಹ್ಮದ್ ಶೇಕ್ ಶಿವಾನಂದ ಬಿರಾದಾರ್ ಅಬ್ದುಲ್ ರಜಾದ್ ತಮದಡ್ಡಿ ಮಲ್ಲಿಕಾರ್ಜುನ್ ಮಾದರ್ ನಾರಾಯಣ ಬಡಿಗೇರ್ ಸಂಗಪ್ಪ ಗಂಗಶೆಟ್ಟಿ ಹೂವನ್ ಪೂಜಾರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು..