ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ Karnataka Border Area Development Authority, ಕನ್ನಡ ಮತ್ತು ಸಂಸ್ಕøತಿ ಇಲಾಖೆ Department of Kannada and Culture, ಜಿಲ್ಲಾಡಳಿತ ವಿಜಯಪುರ ಜಿಲ್ಲೆ ಹಾಗೂ ಶ್ರೀ ಗುಡ್ಡಾಪುರ ದಾನಮ್ಮದೇವಿ ದೇವಸ್ಥಾ ಟ್ರಸ್ಟ್ ಹಾಗೂ ಕರ್ನಾಟಕ / ಮಹಾರಾಷ್ಟ್ರ ರಾಜ್ಯದ ಎಲ್ಲಾ ಕನ್ನಡ ಪರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಹಮ್ಮಿಕೊಂಡ ಕರ್ನಾಟಕ ಸಂಭ್ರಮ -50 ಸಾಂಸ್ಕøತಿ ಕಾರ್ಯಕ್ರಮದಲ್ಲಿ ವಿಜಯಪುರದ ನವರಸ ನೃತ್ಯ ಕಲಾ ಸಂಸ್ಥೆಯ ಅಂತರಾಷ್ಟ್ರೀಯ ನೃತ್ಯ ಕಲಾವಿದರಾದ ರಂಗನಾಥ ಬತ್ತಾಸಿ ಹಾಗೂ ಶ್ರೀಮತಿ ಸುನಂದಾ ರಂಗನಾಥ ಬತ್ತಾಸಿ ದಂಪತಿ ಹಾಗೂ ತಂಡದಿಂದ ದಾನಮ್ಮದೇವಿ ನೃತ್ಯ ರೂಪಕ ಹಾಗೂ ಕರ್ನಾಟಕ ವೈಭವ ನೃತ್ಯ ರೂಪಕ ಪ್ರದರ್ಶನ ನೀಡಿದರು. ಈ ಪ್ರದರ್ಶನವು ಜನಮನಸೂರೆಗೊಂಡಿತು.
Karnataka Border Area Development Authority ಇದೇ ಸಂದರ್ಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಹಾಗೂ ಕನ್ನಡ ಸಂಸ್ಕøತಿ ಇಲಾಖೆ ಬೆಂಗಳೂರಿನ ಜಂಟಿ ನಿರ್ದೇಶಕರಾದ ಅಶೋಕ ಚಲವಾದಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವಿಜಯಪುರ ಉಪ ನಿದೇಶಕರಾದ ಸಂತೋಷ ಭೋವಿ ಸೇರಿದಂತೆ ವಿವಿಧ ಗಣ್ಯ ಮಾನ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ: Vijayapur News | ಕರ್ನಾಟಕ ಸಂಭ್ರಮ-50 ಆಚರಣೆ | ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ