ವಿಜಯಪುರ: ದೌಜನ್ಯ ಪ್ರಕರಣ ಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಲಮಿತಿಯಲ್ಲಿ ಪ್ರಕರಣಗಳ ಇತ್ಯಥ್ಯಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿ ಪ್ರಕರಣಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ ಧನವನ್ನು ಆದ್ಯತೆ ಮೇಲೆ ಸಂತ್ರಸ್ಥರಿಗೆ ಬಿಡುಗಡೆ ಮಾಡಬೇಕು ಎಂದು ಸೂಚಿಸಿದರು.
ಇದನ್ನೂ ಓದಿ: Vijayapura News | ಎಲ್ಲಾ ಮುಗಿದ ಮೇಲೆ ಟೀಂ ಮಾಡಿದ್ದಾರೆ | ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ
ದೌರ್ಜನ್ಯ ಪ್ರಕರಣ ಪ್ರತಿಬಂಧ ಅಧಿನಿಯಮ, ಅಸ್ಪøಶ್ಯತೆ ನಿವಾರಣೆ ಕುರಿತು ಅರಿವು ಮೂಡಿಸುವ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರಗಳನ್ನು ಜಿಲ್ಲಾ ಮಟ್ಟದಲ್ಲಿ ಸೇರಿದಂತೆ ತಾಲೂಕಾ ಹಾಗೂ ಗ್ರಾಮ ಮಟ್ಟದಲ್ಲಿ ಆಯೋಜಿಸುವ ಮೂಲಕ ಜಾಗೃತಿ ಮೂಡಿಸಬೇಕು. ಇಂತಹ ಕಾರ್ಯಕ್ರಮಗಳಿಗೆ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರನ್ನು ಆಹ್ವಾನಿಸಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಮಾಹಿತಿಯನ್ನೊಳಗೊಂಡ ಫಲಕವನ್ನು 10 ದಿನಗಳೊಳಗಾಗಿ ಅಳವಡಿಸಬೇಕು ಎಂದು ಹೇಳಿದರು.
ಬ್ಯಾಂಕಿನ ಮೂಲಕ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದಾಗ ಅರ್ಹರಿಗೆ ವಿಳಂಬ ಮಾಡದೇ ಸಾಲ-ಸೌಲಭ್ಯ ನೀಡುವ ಮೂಲಕ ಅರ್ಥಿಕವಾಗಿ ಸದೃಡಗೊಳಿಸಲು ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.
ಇದನ್ನೂ ಓದಿ: Vijayapura News | ಅಧ್ಯಾಪಕರ ‘ಸಾಮರ್ಥ್ಯ ವೃದ್ಧಿ’ ಕಾರ್ಯಾಗಾರಗಳು ಮಹತ್ವಪೂರ್ಣವಾದದ್ದು – ಡಾ.ಬಿ.ಎಮ್.ಪಾಟೀಲ್
ಎಸ್ಸಿ-ಎಸ್ಟಿ ಜನಾಂಗದ ಆರ್ಥಿಕ ಮಟ್ಟ ಸುಧಾರಿಸಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಎಲ್ಲ ಇಲಾಖೆಗಳಲ್ಲಿ ಎಸ್ಸಿಪಿ-ಟಿಎಸ್ಪಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಸರ್ಕಾರದ ಸೌಲಭ್ಯ ಲಾಭ ದೊರಕಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.
ಅಂಗನವಾಡಿಯಲ್ಲಿ ಕಟ್ಟಡ, ಅಂಗನವಾಡಿಯಲ್ಲಿ ನೇಮಕಾತಿ, ಸ್ಮಶಾನ ಜಾಗ ಒತ್ತುವರಿ ತೆರವುಗೊಳಿಸುವುದು, ರಸ್ತೆ ಅತಿಕ್ರಮಣ ತೆರವು, ಪರಿಶಿಷ್ಟ ಜಾತಿ, ಪಂಗಡದ ನೌಕರರ ಮುಂಬಡ್ತಿ, ಸಮುದಾಯ ಭವನ ನಿರ್ಮಾಣ, ವಿದ್ಯುತ್ ಸಂಪರ್ಕ, ಭೂ ಒಡೆತನ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಸಭೆಯ ಗಮನಕ್ಕೆ ತಂದಾಗ ಈ ಕುರಿತು ಜಿಲ್ಲಾಧಿಕಾರಿಗಳು, ಅತ್ಯಂತ ತ್ವರಿತವಾಗಿ ಈ ಎಲ್ಲ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಇದನ್ನೂ ಓದಿ: Bagalkote News | ಏಕಲವ್ಯ – ವೈದ್ಯಕೀಯ ಭಿತ್ತಿಚಿತ್ರ ಪ್ರದರ್ಶನ ಸ್ಪರ್ಧೆ| ಡಾ.ವೀರಣ್ಣ ಚರಂತಿಮಠರಿಂದ ಅಭಿನಂಧನೆ
ಅಭಿಷೇಕ ಚಕ್ರವರ್ತಿ ಅವರು ಮಾತನಾಡಿ, ದೌರ್ಜನ್ಯ ಪ್ರತಿಬಂಧ ಅಧಿನಿಯಮ, ಅಸ್ಪøಶ್ಯತೆ ನಿವಾರಣೆ ಕುರಿತು ಅರಿವು ಮೂಡಿಸುವ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರಗಳನ್ನು ಗ್ರಾಮ ಮಟ್ಟದಲ್ಲಿ ಹಮ್ಮಿಕೊಂಡು, ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಭಾಗವಹಿಸುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಿ ಕಾರ್ಯಕ್ರಮದ್ದ ಉದ್ದೇಶ ಸಾಕಾರಗೊಳಿಸಬೇಕು. ದೌರ್ಜನ್ಯ ಪ್ರಕರಣಗಳು ಕಂಡು ಬಂದಲ್ಲಿ ತ್ವರಿತವಾಗಿ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ,ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿ.ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ಕುಮಾರ ಗುಣಾರಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ ಸೌದಾಗರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೆಶಕ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲಿಕ ಮಾನವರ, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರುಗಳಾದ ಮದನಕುಮಾರ ನಾಗರದಿನ್ನಿ, ನಿರ್ಮಲಾ ಹೊಸಮನಿ, ಸಿದ್ದು ರಾಯಣ್ಣವರ, ಬಂದಗಿ ಸಿದ್ದಪ್ಪ ಗಸ್ತಿ, ಯಮನಪ್ಪ ಸಿದರಡ್ಡಿ, ಮಹಾಂತೇಶ ಸಾಸಬಾಳ, ಮಲ್ಲು ತಳವಾರ, ರಾಜಶೇಖರ ಚೌರ, ರವಿಕಾಂತ ಬಿರಾದಾರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: Bagalkote News | ಚಿನ್ನದ ಪದಕ ವಿಜೇತೆ ಅನಿತಾ ಚವ್ಹಾಣಗೆ ರಾಜ್ಯ ವುಶು ಸಂಸ್ಥೆಯಿಂದ ಸನ್ಮಾನ