ಬಾಗಲಕೋಟೆ: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು Lokayukta Public Relations Meeting ನವೆಂಬರ 20 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ವರೆಗೆ ಬಾಗಲಕೋಟೆ ತಾಲೂಕಾ ಪಂಚಾಯತ ಕಾರ್ಯಾಲಯದಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಂಡಿದ್ದಾರೆ.
ಸಾರ್ವಜನಿಕರು ಸರ್ಕಾರಿ ಕೆಲಸಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿನಾಕಾರಣ ವಿಳಂಬ ಹಾಗೂ ಇನ್ನೀತರ ತೊಂದರೆ ಆಗಿದ್ದರೆ ಅಂತಹ ಅಧಿಕಾರಿ ಮತ್ತು ನೌಕರರ ವಿರುದ್ದ ಸಾರ್ವಜನಿಕರು ಸಭೆಗೆ ಹಾಜರಾಗಿ ಲಿಖಿತ ದೂರುಗಳನ್ನು ಸಲ್ಲಿಸಬಹುದಾಗಿದೆ. Lokayukta Public Relations Meeting ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂಸಂ.08354-236200, 295170ಗೆ ಸಂಪರ್ಕಿಸುವಂತೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸತೀಶ ಚಿಟಗುಬ್ಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Vijayapura News | ಮಹಾನಗರ ಪಾಲಿಕೆಯ ವಾರ್ಡ್ ನಂ.29 ರ ಉಪ ಚುನಾವಣೆ | ಪ್ರೇಮಾನಂದ ಬಿರಾದಾರ ಮನೆ ಮನೆ ತೆರಳಿ ಮತಯಾಚಣೆ