
ವಿಜಯಪುರ: Women’s Athletics Championships ಕ್ರೀಡೆ ಎನ್ನುವುದು ಕೇವಲ ಒಂದು ದಿನದ ಚಟುವಟಿಕೆಯಾಗದೆ, ಅದು ನಮ್ಮ ದಿನನಿತ್ಯ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ಬೆಂಗಳೂರಿನ ಅಂತರರಾಷ್ಟ್ರೀಯ ಕ್ರೀಡಾಪಟು ಬಿಂದು ರಾಣಿ ಜಿ. ಹೇಳಿದರು.
Women’s Athletics Championships ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘18ನೇ ಅಂತರ ಮಹಿಳಾ ಮಹಾವಿದ್ಯಾಲಯಗಳ ಅಥ್ಲೇಟಿಕ್ ಕ್ರೀಡಾಕೂಟ’ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ: Vijayapura News | ಕನ್ನಡ ಪುಸ್ತಕ ಪರಿಷತ್ತು ಸಮ್ಮೆಳನಾಧ್ಯಕ್ಷ ಡಾ.ಪ್ರಕಾಶ ಖಾಡೆಗೆ ಆಹ್ವಾನ
ಕ್ರೀಡೆ ದೇಹಕ್ಕೆ ಶಕ್ತಿ ನೀಡುವುದರ ಜೊತೆಗೆ ಮನಸ್ಸಿಗೆ ಶಾಂತಿ ಮತ್ತು ಶಿಸ್ತನ್ನು ಒದಗಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಕ್ರೀಡೆಯು ಕ್ರೀಡಾ ವಿಜ್ಞಾನವಾಗಿ ವಿಸ್ತಾರಗೊಂಡಿದ್ದು, ಆರೋಗ್ಯ ಮತ್ತು ಜೀವನಶೈಲಿಯಲ್ಲಿ ಅದರ ಪ್ರಾಮುಖ್ಯತೆಯನ್ನು ತೋರಿಸುತ್ತದೆ. “ಯಶಸ್ಸಿಗಿಂತ ಭಾಗವಹಿಸುವುದು ಮುಖ್ಯ” ಎಂಬ ನಿಜವಾದ ತತ್ವವನ್ನು ಅರ್ಥಮಾಡಿಕೊಳ್ಳಲು ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ.
ಕ್ರೀಡೆಗಳು ತಾಂತ್ರಿಕ ಕೌಶಲ್ಯವನ್ನಷ್ಟೇ ಬೆಳೆಸದೆ, ಆತ್ಮವಿಶ್ವಾಸ, ಸಹಕಾರ ಮತ್ತು ಇಚ್ಛಾಶಕ್ತಿಯನ್ನು ಹೆಚ್ಚಿಸುತ್ತವೆ. “ನನ್ನಲ್ಲಿ ಎಲ್ಲವೂ ಸಾಧ್ಯ” ಎಂಬ ಭಾವನೆ ಪ್ರತಿಯೊಬ್ಬ ಆಟಗಾರನೊಳಗಿರುವ ಜ್ವಾಲೆಯನ್ನು ಬೆಳಗಿಸುತ್ತದೆ. ಕ್ರೀಡೆಯ ಮಹತ್ವವನ್ನು ಪ್ರತಿನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.

ಇದನ್ನೂ ಓದಿ: Bagalkote News | ವಿಶ್ವ ಶೌಚಾಲಯ ದಿನಾಚರಣೆ | ನಮ್ಮ ಶೌಚಾಲಯ, ನಮ್ಮ ಗೌರವ ಆರೋಗ್ಯಕ್ಕಾಗಿ ಶೌಚಾಲಯ ಬಳಸಿ : ಡಾ.ಪುನಿತ್
ಇದೇ ಸಂದರ್ಭದಲ್ಲಿ ನಗರದ ಕೆನರಾ ಬ್ಯಾಂಕನ ಡಿವಿಜ್ನಲ್ ಮ್ಯಾನೇಜರ್ ರೇಣುಕಾ ಜಿ ಮಾತನಾಡಿ, ಶಿಕ್ಷಣ ಎನ್ನುವುದು ಜೀವನದ ದಿಶೆಯನ್ನು ತೋರಿಸುವ ದೀಪದಂತೆ, ನಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮಾರ್ಗದರ್ಶಕವಾಗುತ್ತದೆ. ಆದರೆ ವಿದ್ಯೆಯ ಜೊತೆಗೆ ಕ್ರೀಡೆಯೂ ಜೀವನದ ಮಹತ್ವದ ಭಾಗವಾಗಿದೆ. ಕ್ರೀಡಾಪಟುಗಳು ತಮ್ಮ ಗುರಿ ತಲುಪಲು ತೋರಿಸುವ ಶ್ರದ್ಧೆ, ಶಿಸ್ತು, ಮತ್ತು ತ್ಯಾಗಗಳು ಜೀವನದಲ್ಲಿ ಯಶಸ್ಸಿನ ದಾರಿ ತೋರಿಸುತ್ತವೆ. ಅದನ್ನು ನಾವು ಶ್ರೇಷ್ಠ ಗುರುವಿನ ಗುಣಗಳೊಂದಿಗೆ ಹೋಲಿಸಬಹುದು. ಶಿಕ್ಷಣ ಮತ್ತು ಕ್ರೀಡೆಗಳ ಸಮನ್ವಯವು ದೈಹಿಕ, ಮಾನಸಿಕ, ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಕ್ರೀಡೆ ಕೇವಲ ದೈಹಿಕ ಚಟುವಟಿಕೆಯಲ್ಲ, ಅದು ಶಿಸ್ತು, ಪರಿಶ್ರಮ, ಮತ್ತು ತಂಡದ ಶಕ್ತಿಯನ್ನು ಬೆಳಸುವ ಒಂದು ಪ್ರಕ್ರಿಯೆ. ಇಂತಹ ಆಟಗಳು ನಮ್ಮ ವಿಶ್ವವಿದ್ಯಾನಿಲಯಕ್ಕೆ ಹೊಸ ಚೈತನ್ಯವನ್ನು ತುಂಬುತ್ತವೆ ಮತ್ತು ಪ್ರಗತಿಗೆ ದಾರಿ ತೋರಿಸುತ್ತವೆ. ಕ್ರೀಡಾಪಟುಗಳ ಈ ಉತ್ಸಾಹವು ಉಳಿದ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿ, ವಿಶ್ವವಿದ್ಯಾನಿಲಯದ ಹೆಸರನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವಂತಾಗಬೇಕು ಎಂದರು.

ಇದನ್ನೂ ಓದಿ: Vijayapura News | 21 ಕೆ.ಜಿ. ವಿಭಾಗದಲ್ಲಿ ಇಮಾಂಕ ರುಣವಾಲಗೆ ಕಂಚಿನ ಪದಕ
ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಮಾತನಾಡಿ, ಉತ್ತಮ ಕ್ರೀಡಾಪಟುಯಾಗಬೇಕಾದರೆ ನಿರಂತರ ಪರಿಶ್ರಮ, ಶಿಸ್ತು, ಮತ್ತು ಎಲ್ಲಾ ಕ್ರೀಡೆಗಳ ತಂತ್ರಗಳನ್ನು ಕರಗತ ಮಾಡಿಕೊಳ್ಳುವ ಮನೋಭಾವನೆಯು ಅವಶ್ಯಕವಾಗಿದೆ. ಕ್ರೀಡೆಯ ಜೊತೆಗೆ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳುವುದು ಅಗತ್ಯ, ಏಕೆಂದರೆ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯ ಕ್ರೀಡಾ ಸಾಧನೆಗೆ ಅವಿಭಾಜ್ಯವಾಗಿದೆ. ಗೆಲವು ಮತ್ತು ಸೋಲು ಸಮಾನವಾಗಿ ಸ್ವೀಕರಿಸಬೇಕು ಎಂಬ ತತ್ವವನ್ನು ಪಾಲಿಸುವ ಮೂಲಕ ಸೋಲಿನಲ್ಲೂ ಗೆಲುವಿನ ಪಾಠಗಳನ್ನು ಕಲಿಯಲು ಶಕ್ತರಾಗಬೇಕು. ಕ್ರೀಡಾ ವಾತಾವರಣದಲ್ಲಿ ತೋರುವ ಶ್ರೇಷ್ಠ ಪ್ರದರ್ಶನವು ಕೇವಲ ವ್ಯಕ್ತಿಯ ಸಾಧನೆಗೆಲ್ಲದೇ, ನಮ್ಮ ವಿಶ್ವವಿದ್ಯಾನಿಲಯದ ಹೆಗ್ಗುರುತಿಗೂ ಕಾರಣವಾಗುತ್ತದೆ ಎಂದರು.
ಇದನ್ನೂ ಓದಿ: Vijayapura News | ಶ್ರೇಷ್ಠ ಭಕ್ತ, ಚಿಂತಕ ಕನಕದಾಸರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಮಾತನಾಡಿ, 400ಕ್ಕೂ ಹೆಚ್ಚು ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಕ್ರೀಡೆಯ ಮಹತ್ವ ಮತ್ತು ಪ್ರಭಾವವನ್ನು ಸಾರುತ್ತದೆ. ಕ್ರೀಡೆ ಕೇವಲ ಮನರಂಜನೆಗೆ ಮಾತ್ರ ಸೀಮಿತವಿಲ್ಲ, ಅದು ಸಮಾನತೆ, ತಂಡದ ಒಕ್ಕೂಟ, ಮತ್ತು ಸಮಸ್ಯೆ ಬಗೆಹರಿಸುವ ಕೌಶಲ್ಯವನ್ನು ಕಲಿಸುವ ಶ್ರೇಷ್ಠ ಮಾಧ್ಯಮವಾಗಿದೆ. ನಮ್ಮ ಕ್ರೀಡಾ ವಿಭಾಗ ಆಯೋಜಿಸಿದ್ದ, ಚಟುವಟಿಕೆಗಳು ಕ್ರೀಡಾಪಟುಗಳಿಗೆ ತಮ್ಮ ಕೌಶಲ್ಯ ತೋರಲು ಮತ್ತು ಹೊಸ ಅವಕಾಶಗಳನ್ನು ಹುಡುಕಲು ವೇದಿಕೆ ನೀಡಿವೆ. ಕ್ರೀಡೆಯ ಮೂಲಕ ಸಮಗ್ರ ಜೀವನವನ್ನು ರೂಪಿಸಬೇಕು. ಇತ್ತೀಚಿನ ದಿನಗಳಲ್ಲಿ ಕ್ರೀಡೆಯು ಎತ್ತರಕ್ಕೆ ಬೆಳೆದಿರುವುದು ಸಂತೋಷದ ಸಂಗತಿ, ಮತ್ತು ಈ ಮೂರು ದಿನಗಳಲ್ಲಿ ಎಲ್ಲಾ ಕ್ರೀಡಾಪಟುಗಳು ಶ್ರದ್ಧೆ ಮತ್ತು ಉತ್ಸಾಹದಿಂದ ಆಟ ಆಡಿ, ಶ್ರೇಷ್ಠತೆಯನ್ನು ಪ್ರದರ್ಶಿಸಬೇಕು ಎಂದರು.
ಕ್ರೀಡಾಕೂಟದಲ್ಲಿ ಪ್ರತಿ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಿಂದ 45 ಮಹಿಳಾ ಕಾಲೇಜುಗಳ ಮಹಿಳಾ ಕ್ರೀಡಾ ತಂಡಗಳು, 227 ಕ್ರೀಡಾಪಟುಗಳು ಆಗಮಿಸಿದ್ದರು.
ಇದನ್ನೂ ಓದಿ: Vijayapura News | ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆನ್ಲೈನ್ ನೋಂದಣಿಗೆ ಅವಕಾಶ
ಕ್ರೀಡಾಕೂಟಕ್ಕೆ ಆಗಮಿಸಿದ ಎಲ್ಲ ಕ್ರೀಡಾತಂಡಗಳು ಪಥಸಂಚಲನ ನಡೆಸಿದರು. ಇದರಲ್ಲಿ ವಿಶೇಷವಾಗಿ ಮಹಿಳಾ ವಿವಿಯ ಮಹಿಳಾ ಬ್ಯಾಂಡ್ ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಯ ಕ್ರೀಡಾಪಟುಗಳು, ನಿರ್ದೇಶಕರು, ವ್ಯವಸ್ಥಾಪಕರು, ಮಹಿಳಾ ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: Vijayapura News | ಜಿಲ್ಲಾಡಳಿತದಿಂದ ಸಂತ ಶ್ರೇಷ್ಠ ಭಕ್ತ ಕನಕದಾಸ ಜಯಂತಿ ಆಚರಣೆ
ಕಾರ್ಯಕ್ರಮದಲ್ಲಿ ಪ್ರದರ್ಶಕ ಕಲೆಗಳ ವಿಭಾಗದ ವಿದ್ಯಾರ್ಥಿನಿಯರು ಮಹಿಳಾ ಗೀತೆ ಹಾಡಿದರು. ಕ್ರೀಡಾ ನಿರ್ದೇಶಕ ಪ್ರೊ.ಸಕ್ಪಾಲ ಹೂವಣ್ಣ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅಶ್ವಿನಿ ಕೆ.ಎನ್ ಹಾಗೂ ಸಂಶೋಧನಾ ವಿದ್ಯಾರ್ಥಿನಿ ಕರುಣಾ ಅತಿಥಿಯರನ್ನು ಪರಿಚಯಿಸಿದರು. ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕ ಡಾ.ಹನುಮಂತಯ್ಯ ಪೂಜಾರಿ ನಿರೂಪಿಸಿದರು. ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕ ಡಾ.ರಾಜಕುಮಾರ ಮಾಲಿಪಾಟೀಲ ವಂದಿಸಿದರು.