Bagalkote News | ಮಕ್ಕಳಲ್ಲಿನ ಅಪೌಷ್ಠಿಕತೆ ತಡೆಗೆ ಕ್ರಮ : ಸಿಇಒ ಕುರೇರ್

ಅಂಗನವಾಡಿಗಳಿಗೆ ಬರುವ ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಸೂಚಿಸಿದರು.

0
30
ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ

ಬಾಗಲಕೋಟೆ: Action to prevent malnutrition ಅಂಗನವಾಡಿಗಳಿಗೆ ಬರುವ ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಸೂಚಿಸಿದರು.

ಜಿಲ್ಲಾ ಪಂಚಾಯತ್ ಹಳೆಯ ಸಭಾಂಗಣದಲ್ಲಿ ಶುಕ್ರವಾರ ಜರುಗಿದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನಾಡಿ ಮೇಲ್ವಿಚಾರಕಿಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂಗನವಾಡಿ ಮೇಲ್ವಿಚಾರಕಿಯರು ಕಡ್ಡಾಯವಾಗಿ ಪ್ರತಿ ತಿಂಗಳು ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಪೌಷ್ಠಿಕತೆ ಇರುವ ಮಕ್ಕಳನ್ನು ಗುರುತಿಸಿ, ಅಂತಹ ಮಕ್ಕಳನ್ನು ಎನ್ ಆರ್ ಸಿ ಕೇಂದ್ರಗಳಿಗೆ ದಾಖಲಿಸಿ ಸೂಕ್ತ ಚಿಕಿತ್ಸೆಯನ್ನು ನೀಡಬೇಕು ಎಂದರು.

ಇದನ್ನೂ ಓದಿ: Bagalkote News | ಡಿ. 1 ರಂದು ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ವಿಕಲಚೇತನರು ಭಾಗವಹಿಸಿ | ಮಹಾಂತೇಶ ಮನವಿ

Action to prevent malnutrition ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳು ಗುಣಮಟ್ಟದಿಂದ ಕೂಡಿರಬೇಕು. ದೂರುಗಳು ಬರುತ್ತಿರುವ ಹಿನ್ನಲೆಯಲ್ಲಿ ಶಿಶುಪಾಲನಾ ಯೋಜನಾಧಿಕಾರಿ ಹಾಗೂ ಎಸಿಡಿಪಿಒ ಅಧಿಕಾರಿಗಳು ಕಡ್ಡಾಯವಾಗಿ ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು ಎಂದು ಹೇಳಿದರು.

ಮಕ್ಕಳಿಗೆ ಮೂಲಭೂತ ಸೌಕರ್ಯಗಳಾದ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಚ ಶೌಚಾಲಯದ ವ್ಯವಸ್ಥೆ ಮಾಡಬೇಕು. ಗ್ರಾಮಗಳಲ್ಲಿ ನಡೆಯುವ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕ್ರಮ ವಹಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಭಾಕರ ಕವಿತಾಳ ಇದ್ದರು.

ಇದನ್ನೂ ಓದಿ: Vijayapura News | ಕಳಪೆ ತೊಗರಿ ಬೀಜ ವಿತರಿಸಿದ ಕಂಪನಿ | ರೈತರಿಗೆ ಪರಿಹಾರ ನೀಡಲು ಆಗ್ರಹ


LEAVE A REPLY

Please enter your comment!
Please enter your name here