Vijayapura News | ಎಬಿವಿಪಿಯಿಂದ ಖಾಲಿ ಕುರ್ಚಿಗೆ ಮನವಿ

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ತಂತ್ರಾಂಶದ ದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ABVP protests in Vijayapura ವಿಜಯಪುರ ವತಿಯಿಂದ ಬಂಜಾರಾ ಕ್ರಾಸ್ ಹತ್ತಿರ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಲಾಯಿತು.

0
27

ವಿಜಯಪುರ : ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ತಂತ್ರಾಂಶದ ದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ABVP protests in Vijayapura ವಿಜಯಪುರ ವತಿಯಿಂದ ಬಂಜಾರಾ ಕ್ರಾಸ್ ಹತ್ತಿರ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಲಾಯಿತು. ಈ ಸಮಯದಲ್ಲಿ ಸಂಬಂಧಪಟ್ಟ ಯಾವ ಅಧಿಕಾರಿಗಳು ಮನವಿ ಸ್ವೀಕಾರ ಮಾಡದೇ ಇರುವದಕ್ಕೆ ಖಾಲಿ ಕುರ್ಚಿಗೆ ಮನವಿ ಸಲ್ಲಿಸಿ ಉಗ್ರವಾಗಿ ಹೋರಾಟ ಮಾಡಲಾಯಿತು.

ಇದನ್ನೂ ಓದಿ: Vijayapura News | ಮಾದಕ ವಸ್ತುಗಳ ಮಾರಾಟ ಜಾಲವನ್ನು ತಕ್ಷಣವೇ ಬಂಧಿಸಿ | ವಿಜಯಕುಮಾರ ಕುಡುಗಿನೂರ

ಬೆಳಗಾವಿಯ ಪ್ರತಿಷ್ಠಿತ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ ಯು.ಯು.ಸಿ.ಎಮ್.ಎಸ್. ತಂತ್ರಾಂಶದಲ್ಲಿ ಬಹಳ ದೋಷಗಳಿಂದ ವಿಧ್ಯಾರ್ಥಿಗಳ ಪರದಾಡುವಂತಹ ಸ್ಥಿತಿಗೆ ಬಂದಿದೆ. ABVP protests in Vijayapura ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಪದವಿ ಕಾಲೇಜುಗಳ ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ ಡಿಸೆಂಬರ್ ನಲ್ಲಿ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಪರೀಕ್ಷಾ ಅರ್ಜಿ ತುಂಬುತ್ತಿದ್ದಾರೆ ವಿಧ್ಯಾರ್ಥಿಗಳ ಖಾತೆಯಿಂದ ಹಣ ಪಾವತಿಯಾಗುತ್ತಿದೆ ಆದರೆ ಅರ್ಜಿ ಸಲ್ಲಿಕೆ ಆಗದೆ ವಿದ್ಯಾರ್ಥಿಗಳು ಚಿಂತೆಗೀಡಾಗುತ್ತಿದ್ದಾರೆ. ನಿಮ್ಮ ಅರ್ಜಿ ಫೇಲ್ಡ್ ಎಂಬ ಸಂದೇಶದಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ.

ಇದನ್ನೂ ಓದಿ: Vijayapura News | 172 ರೌಡಿ ಶೀಟರ್‌ಗಳ ವಿರುದ್ಧ ಕಾರ್ಯಾಚರಣೆ | SP ಲಕ್ಷ್ಮಣ ನಿಂಬರಗಿ

ಈಗಾಗಲೇ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಪದವಿ ಕಾಲೇಜುಗಳ ಪರೀಕ್ಷಾ ಅರ್ಜಿ ಯು.ಯು.ಸಿ.ಎಮ್.ಎಸ್. ವೆಬ್ ಸೈಟ್ ನಲ್ಲಿ ಅರ್ಜಿ ತುಂಬುವ ಪ್ರಕ್ರಿಯೆ ಶುರುವಾಗಿದೆ. ಆದರೆ ಬಹುತೇಕ ವಿದ್ಯಾರ್ಥಿಗಳ ಖಾತೆಯಿಂದ ಹಣ ಜಮೆಯಾಗಿದೆ ಆದರೆ ಸರಿಯಾದ ಅರ್ಜಿ ಯಶಸ್ವಿ ಆಗಿರುವ ಸಂದೇಶ ಬರುತ್ತಿಲ್ಲ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕೇಳಿದರೆ ವಿಶ್ವವಿದ್ಯಾಲಯದಲ್ಲಿ ಕೇಳಿ ಎಂದು ಹೇಳುತ್ತಾರೆ.

ಇದನ್ನೂ ಓದಿ: Vijayapura News | ಮುಳವಾಡ ಅಕ್ರಮ ಟೋಲ್ ವಸೂಲಿಗೆ ಬ್ರೇಕ್ ಹಾಕಲು ಸೋಮನಾಥ ಕಳ್ಳಿಮನಿ ಒತ್ತಾಯ

ವಿಜಯಪುರ, ಬಾಗಲಕೋಟೆಯಿಂದ ಬಂದ ವಿದ್ಯಾರ್ಥಿಗಳು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕೇಳಿದರೆ ಶುಲ್ಕ ಮತ್ತೊಮ್ಮೆ ಪಾವತಿಸಿ ಎಂದು ಇಲ್ಲವೇ ಯು.ಯು.ಸಿ.ಎಮ್.ಎಸ್. ಬಳಿ ಹೋಗಿ ಕೇಳಿ ಎಂದು ಹೇಳುತ್ತಿದ್ದಾರೆ ಈ ಎಲ್ಲ ವ್ಯವಸ್ಥೆಯಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಈಡಾಗಿದ್ದಾರೆ ಆದ್ದರಿಂದ ಈ ಪರೀಕ್ಷಾ ಶುಲ್ಕ ಸೇರಿದಂತೆ ಇತರೆ ಶುಲ್ಕಗಳನ್ನು ತಮ್ಮ ಕಾಲೇಜು ಹಂತದಲ್ಲಿ ಆನ್‍ಲೈನ್ ವ್ಯವಸ್ಥೆ ರದ್ದುಗೊಳಿಸಿ ಆಫ್ ಲೈನ್ ತುಂಬುವ ವ್ಯವಸ್ಥೆ ಮಾಡಬೇಕು ಇಲ್ಲವೇ ಈ ಸಮಸ್ಯೆಯನ್ನು ವಿಶ್ವವಿದ್ಯಾಲಯ ಮತ್ತು ಸರಕಾರ ಕೂಡಲೇ ಪರಿಹರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದೆ ಹೋದಲ್ಲಿ ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: Vijayapura News | ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜಯಪುರ ಕ್ರೀಡಾಪಟುಗಳ ಸಾಧನೆ

ಈ ಸಮಯದಲ್ಲಿ ಜಿಲ್ಲಾ ಸಂಚಾಲಕ ಮಂಜುನಾಥ ಹಳ್ಳಿ, ಶಿವನಗೌಡ ಬಿರಾದಾರ,ಶ್ರೀಕಾಂತ ಬಿರಾದಾರ, ಸುಜ್ಞಾತ ಕುಲಕರ್ಣಿ, ಪ್ರವೀಣ ಬಿರಾದಾರ, ಸಂದೀಪ ಅರಳಗುಂಡಿ, ಚೇತನ ಕೊರವಾರ, ಮಹೇಶ ಗೌಡ ಮಿರ್ಜಿ, ಸುರೇಶ ಲೋನಾರ, ಆನಂದ ಪೂಜಾರಿ, ಕಾರ್ತಿಕ ಮಾಳಿ, ದುಂಡಪ್ಪ ನೆಲೋಗಿ, ರಮೇಶ ನಾಟೀಕಾರ, ಯೋಗೇಶ ಹಾಗೂ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here