ವಿಜಯಪುರ: ಆಧುನಿಕ ಭಾರತದ ನಿರ್ಮಾತೃ ಹಾಗೂ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೆಬ್ ಅಂಬೇಡ್ಕರ ಅವರ ತ್ಯಾಗ ಮತ್ತು ಸಮಾಜ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ 68th Maha Parinirvana Day ಎಂದು ಗುಲಬರ್ಗಾ ವಿ.ವಿಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಹೆಚ್.ಟಿ. ಪೋತೆ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಪ.ಜಾ/ಪ.ಪಂ ಘಟಕದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನಾಚರಣೆಯ 68th Maha Parinirvana Day ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ: Vijayapura News | 23 ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ | ಸ್ಪಂದಿಸದ ಆಧಿಕಾರಿಗಳು | ನ್ಯಾಯಕ್ಕಾಗಿ ಹೋರಾಟ
ಡಾ.ಅಂಬೇಡ್ಕರ್ ಅವರ ಆಂದೋಲನಗಳು ಮತ್ತು ದೃಷ್ಟಿಕೋನವು ದೇಶದ ಅಭಿವೃದ್ಧಿಗೆ ಮಹತ್ವಪೂರ್ಣವಾದ ಕೊಡುಗೆ ನೀಡಿವೆ. ಕಾರ್ಮಿಕರ ಹಕ್ಕುಗಳನ್ನು, ಸಮಾನತೆ ಮತ್ತು ನ್ಯಾಯವನ್ನು ಎತ್ತಿಹಿಡಿದ ಅವರು, ಹೆಣ್ಣುಮಕ್ಕಳ ಶಿಕ್ಷಣ ಮತ್ತು ಸಾಮಾಜಿಕ ಸ್ಥಾನಮಾನವನ್ನು ಹೆಚ್ಚಿಸಲು ಹಲವಾರು ಕ್ರಮಗಳನ್ನು ತೆಗೆದುಕೊಂಡರು. ಅಂಬೇಡ್ಕರ್ ಅವರ ಸಾಹಸ ಮತ್ತು ಸಮರ್ಥ ಕಾರ್ಯಗಳು ಸಮಾಜದಲ್ಲಿ ಬದಲಾವಣೆಯನ್ನು ತರಲು ಮತ್ತು ನವೀನ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿವೆ ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಅಂಬೇಡ್ಕರ ಅವರು ಈ ದೇಶಕ್ಕೆ ಮಹಾನ್ ಕೊಡುಗೆ ನೀಡಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಸಂವಿಧಾನದ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಸಂಘಟಿಸಿ ವಿಜೇತರಿಗೆ ನಗದು ಬಹುಮಾನ ನೀಡಿದರು.
ಇದನ್ನೂ ಓದಿ: Vijayapura News | ಎಬಿವಿಪಿಯಿಂದ ಖಾಲಿ ಕುರ್ಚಿಗೆ ಮನವಿ
ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಮಾತನಾಡಿ, ಅಂಬೇಡ್ಕರ ಅವರ ಜೀವನ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತದ ಆರ್ಥಿಕ ಪ್ರಗತಿಗೆ ಮಹತ್ವಪೂರ್ಣ ಕೊಡುಗೆಗಳನ್ನು ನೀಡಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಅವರು ಆರ್ಥಿಕ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸಲು ತತ್ವಗಳನ್ನು ರೂಪಿಸಿ, ದಲಿತರು ಹಾಗೂ ಹಿಂದುಳಿದ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಹಕ್ಕುಗಳನ್ನು ರಕ್ಷಿಸಲು ಹಲವು ಕ್ರಮಗಳನ್ನು ಜಾರಿಗೆ ತಂದರು ಎಂದರು.
ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಸಂಜೀವಕುಮಾರ ಗಿರಿ ಸ್ವಾಗತಿಸಿದರು. ಪ.ಜಾ/ಪ.ಪಂ ಘಟಕದ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ನಿರೂಪಿಸಿದರು ಮತ್ತು ಡಾ.ಬಾಬು ಲಮಾಣಿ ವಂದಿಸಿದರು.