ಮುಂದಿನ ಸಿಎಂ ಉತ್ತರ ಕರ್ನಾಟಕದವರೇ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ

ವಿಜಯಪುರ ಅ.20: ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ಯಡಿಯೂರಪ್ಪನವರು ಬಹಳ ದಿನ ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವುದಿಲ್ಲ,

ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಈಗಗಾಲೇ ಕೇಂದ್ರ ಸರಕಾರಕ್ಕೂ ಯಡಿಯೂರಪ್ಪ ಸಾಕಾಗಿ ಹೋಗಿದ್ದಾರೆ. ನನ್ನ ಕ್ಷೇತ್ರದ 125 ಕೋಟಿ ಅನುದಾನವನ್ನು ಸಿಎಂ ಯಡಿಯೂರಪ್ಪ ಕಡಿತ ಮಾಡಿದ್ದಾರೆ. ನನಗೂ ಯಡಿಯೂರಪ್ಪನವರಿಗೂ ಜಗಳವಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿ. ಉತ್ತರ ಕರ್ನಾಟಕದವರು 100 ಶಾಸಕರನ್ನು ಗೆಲ್ಲಿಸಿ ಕಳುಹಿಸುತ್ತಾರೆ. ಮುಂದಿನ ಬಾರಿ ಉತ್ತರ ಕರ್ನಾಟಕದವರನ್ನೇ ಮುಖ್ಯಮಂತ್ರಿಯವರನ್ನಾಗಿ ಮಾಡುವುದಾಗಿ ಪ್ರಧಾನಿ ಮೋದಿ ಕೂಡ ಭರವಸೆ ನೀಡಿದ್ದಾರೆ ಎಂದು ಹೇಳಿದರು.


 

Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »