ವಿಜಯಪುರ ಜಿಲ್ಲಾ ಹಮಾಲರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ

ಲಾರಿ ಹಮಾಲರ ಯುನಿಯನ್ image

ವಿಜಯಪುರ: ವಿಜಯಪುರ ಜಿಲ್ಲಾ ಹಮಾಲರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಲಾರಿ ಹಮಾಲರ ಯುನಿಯನ್ (ಸಿಐಟಿಯು ಸಂಯೋಜಿತ) ವತಿಯಿಂದ ಜಿಲ್ಲಾಧಿಕಾರಿಗಳು, ಹಾಗೂ ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ ಯತ್ನಾಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಲಾರಿ ಹಮಾಲರ ಯುನಿಯನ್ image

ಈ ಸಂಧರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ ಮಾತನಾಡಿ, ಅಸಂಘಟಿತ ಕಾರ್ಮಿಕರ ಸಹಜ ಮರಣಕ್ಕೂ ರೂ. 01 ಲಕ್ಷ ರೂಗಳ ಪರಿಹಾರ ನೀಡಬೇಕು ಹಾಗೂ ಶವ ಸಂಸ್ಕಾರ ಪರಿಹಾರದ ಮೊತ್ತವನ್ನು ರೂ. 25 ಸಾವಿರಕ್ಕೆ ಹೆಚ್ಚಿಸಬೇಕು. ಕರ್ನಾಟಕ ಅಸಂಘಟಿತ ಕಾರ್ಮಿಕರ ಭವಿಷ್ಯನಿಧಿ ಯೋಜನೆ ಹಾಗೂ ಸೂಕ್ತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು.

ಇದನ್ನೂ ಓದಿ: ಸಮ ಸಮಾಜದ ನಿರ್ಮಾಣವೇ ಶರಣರ ಮೂಲ ಆಶಯವಾಗಿತ್ತು ಡಾ.ಮಲ್ಲಮ್ಮ ಯಾಳವಾರ

ಲಾರಿ ಹಮಾಲರ ಯುನಿಯನ್ ಎಲ್ಲಾ ಹಮಾಲಿ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು. ಎಪಿಎಂಸಿ ಕಾಯಕ ನಿಧಿ ಯಡಿ ನಿವೃತ್ತಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಕೂಡಲೇ ಕೇಂದ್ರ ಸರಕಾರ ಇ-ಶ್ರಮ ಕಾರ್ಡ್ ಪಡೆದ ಅಸಂಘಟಿತ ಕಾರ್ಮಿಕರಿಗೆ ಸಮಾಜಿಕ ಭದ್ರತಾ ಸೌಲಭ್ಯಗಳನ್ನು ಜಾರಿಮಾಡಬೇಕು. ಮಿಲ್ ಗೋಡೌನ ವೇರಹೌಸ್‍ಗಳಲ್ಲಿ ಕೆಲಸ ನಿರ್ವಹಿಸುವ ಹಮಾಲಿ ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳನ್ನು ಜಾರಿ ಮಾಡಬೇಕು. ವಸತಿ ಹೀನ ಹಮಾಲರಿಗೆ ವಸ್ತಿ ಯೋಜನೆ ಜಾರಿಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಡಿವೈಎಫ್‍ಐ ಮುಖಂಡರಾದ ಈರಣ್ಣ ಬೆಳ್ಳುಂಡಗಿ ಮಾತನಾಡಿ, ಹಮಾಲರ ಬೇಡಿಕೆಗಳು ನ್ಯಾಯಯುತವಾಗಿದ್ದು ಕೂಡಲೇ ಈರೇಡಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಹಮಾಲಿ ಸಂಘದ ಅಧ್ಯಕ್ಷರಾದ ಮೋದಿನಸಾಬ ಮಮದಾಪೂರ, ಪ್ರಧಾನ ಕಾರ್ಯದರ್ಶಿ ಸಾಬು ಗುಗದಡ್ಡಿ, ಖಜಾಂಚಿ ಮೋದಿನಸಾಬ ಮುಲ್ಲಾ, ವಿಠ್ಠಲ ಬಿರಾದಾರ, ಶೇಖಸಾಬ ಮುಲ್ಲಾ, ಮಲಿಕಸಾಬ ಟಕ್ಕಳಕಿ, ತುಕಾರಾಮ ವಂಬಾಸೆ, ಅಲಿಸಾಬ ಹಿಪ್ಪರಗಿ, ಮಕ್ಬುಲ್‍ಸಾಬ ಬಾಗವಾನ, ಪಾಂಡು ಕಾಂಬಳೆ ಸೇರಿದಂತೆ ನೂರಾರು ಹಮಾಲಿಕಾರ್ಮಿಕರು ಉಪಸ್ಥಿತರಿದ್ದರು.


Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »