ಸರ್ಕಾರ ಎಲ್ಲವನ್ನೂ ಪ್ರೈವೆಟೈಸೇಷನ್ ಮಾಡಲು ಹೊರಟಿದೆ; ’ಆ ದಿನಗಳು’ ಖ್ಯಾತಿಯ ನಟ ಚೇತನ್

ಬೆಂಗಳೂರು ಸೆ 28: ’ಆ ದಿನಗಳು’ ಖ್ಯಾತಿಯ ನಟ ಚೇತನ್, ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡೆ ನೋಡುತ್ತಿದ್ದರೆ ಬ್ರಿಟೀಷ್ ಆಡಳಿತದ ನೆನಪಾಗುತ್ತುದೆ. ಅನ್ನದಾತನನ್ನು ಗುಲಾಮನನ್ನಾಗಿ ಮಾಡಲು ಸರ್ಕಾರ ಹೊರಟಿದೆ ಎಂದು ಕಿಡಿಕಾರಿದ್ದಾರೆ.

ರೈತ ಸಂಘಟನೆಗಳ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ನಟ ಚೇತನ್, ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತರುವ ಮೂಲಕ ಕೃಷಿ ಭೂಮಿ ಕಾರ್ಪೊರೇಟ್ ಕಂಪನಿಗಳ ಕೈ ವಶವಾಗುತ್ತಿದೆ. ಇದರಿಂದ ಸಮಾಜಕ್ಕೆ ಅನ್ನ ನೀಡುವ ಅನ್ನದಾತ ಭೂಮಿ ಕಳೆದುಕೊಳ್ಳಲಿದ್ದಾನೆ. ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ನಮ್ಮ ವಿರೋಧವಿದೆ ಎಂದರು.

ಸರ್ಕಾರಗಳ ಎಲ್ಲವನ್ನೂ ಪ್ರೈವೆಟೈಸೇಷನ್ ಮಾಡಲು ಹೊರಟಿವೆ. ರೈತ ವಿರೋಧಿ ಕಾಯ್ದೆಗಳನ್ನು ಜಾರಿ ತರುವ ಮೂಲಕ ಸರ್ಕಾರಗಳು ರೈತರ ಪರ ಅಲ್ಲ ಎಂಬುದನ್ನು ಸಾಬೀತು ಪಡಿಸುತ್ತಿವೆ. ಕೃಷಿ ಭೂಮಿಯನ್ನು ಯಾರು ಬೇಕಾದರೂ ಕೊಂಡುಕೊಳ್ಳುವುದರಿಂದ ರೈತ ಕೃಷಿ ಭೂಮಿ ಕಳೆದುಕೊಂಡು ಆತ್ಮಹತ್ಯೆ ದಾರಿ ಹಿಡಿಯುವಂತಾಗುತ್ತದೆ. ರೈತರ ಮೇಲೆ ನಡೆಯುತ್ತಿರುವ ಸರ್ಕಾರದ ಈ ದಬ್ಬಾಳಿಕೆ ನೋಡಿದರೆ ಬ್ರಿಟೀಷ್ ಆಡಳಿತ ನೆನಪಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


 

Share the Post:

ಇತ್ತೀಚಿನ ಸುದ್ದಿಗಳು

Senior Students' Association image

Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ

Read More »