ವಿಜಯಪುರ ಎ.04: ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25ಲಕ್ಷ ಹಾಗೂ ಪ್ರಧಾನಮಂತ್ರಿ ಪರಿಹಾರ ನಿಧಿಗೆ 25 ಲಕ್ಷರೂ ಗಳನ್ನು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರ ಮೂಲಕ ಮಾಜಿ ಸಚಿವ ಹಾಗೂ ಬಬಲೇಶ್ವರ ಶಾಸಕರಾದ ಶ್ರೀ ಎಂ.ಬಿ ಪಾಟೀಲ್ ಅವರು ಚಕ್ ನೀಡಿದರು.
ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಸುನಿಲಗೌಡ ಪಾಟೀಲ, ಶಾಸಕ ಸೋಮನಗೌಡ ಪಾಟೀಲ, ಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಜಿ.ರವಿಶಂಕರ ಉಪಸ್ಥಿತರಿದ್ದರು.