ಜನರು ಆತಂಕಪಡುವ ಅಗತ್ಯವಿಲ್ಲ

0
222

ವಿಜಯಪುರ ಎ.07: ವಿದೇಶ ಸೇರಿದಂತೆ ಇತರ ಜಿಲ್ಲೆ, ರಾಜ್ಯಗಳಿಂದ ಜಿಲ್ಲೆಗೆ 418 ಜನರು ಆಗಮಿಸಿರುವ ಬಗ್ಗೆ ವರದಿಯಾಗಿದ್ದು, ಈವರೆಗೆ 59 ಜನರ ಗಂಟಲು ದ್ರವ ಮಾದರಿಗಳನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು, ಈ ಪೈಕಿ 57 ಜನರ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಅವರು 216 ಜನರು 28 ದಿನಗಳ ಅವದಿ ಪೂರ್ಣಗೊಳಿಸಿದ್ದು, 172 ಜನರು 15 ರಿಂದ 28 ದಿನಗಳ ರಿಪೋರ್ಟಿಂಗ್ ಅವದಿಯಲ್ಲಿದ್ದಾರೆ. ಒಟ್ಟು 30 ಜನರು ಹೋಮ್‍ಕ್ವಾರಂಟೈನ್‍ದಲ್ಲಿದ್ದು, 09 ಜನರು ಆಸ್ಪತ್ರೆಯ ಐಸೋಲೇಶನ್‍ದಲ್ಲಿದ್ದಾರೆ. ಇನ್ನು 2 ವೈದ್ಯಕೀಯ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಆದೇಶದಂತೆ ಇಂದಿನಿಂದ ಬೇಕರಿ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, ಪಾರ್ಸಲ್ ಮೂಲಕ ಮಾತ್ರ ಸಾರ್ವಜನಿಕರು ಪಡೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ತರಕಾರಿ ಮತ್ತು ಹಣ್ಣುಗಳ ಮಾರಾಟದ ಸಂದರ್ಭದಲ್ಲಿ ಕಟ್ಟುನಿಟ್ಟಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದ್ದು, ಜಿಲ್ಲಾಡಳಿತದಿಂದ ಇನ್ನು ಹೆಚ್ಚಿನ ಕಠಿಣ ಕ್ರಮಗಳನ್ನು ಇನ್ನು ಮುಂದೆ ಕೈಗೊಳ್ಳುವುದಾಗಿ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಅನುಪಮ್ ಅಗರವಾಲ್ ಅವರು ಜಿಲ್ಲೆಗೆ ಜನೇವರಿಯಿಂದ ಮಾರ್ಚ್‍ವರೆಗೆ, ಇತರೆ ಜಿಲ್ಲೆ, ರಾಜ್ಯಗಳಿಂದ ತಬ್ಲಿಘಿ ಜಮಾತ್‍ಗೆ ಸಂಬಂಧಿಸಿದ 375 ಜನರು ಬಂದಿರುವ ಬಗ್ಗೆ ಗುರುತಿಸಲಾಗಿದ್ದು, ಇನ್ನು ಶೋಧಕಾರ್ಯ ಕೈಗೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ. ಜಲನಗರದಲ್ಲಿ ಅನಧಿಕೃತವಾಗಿ ಡುಪ್ಲಿಕೇಟ್ ಪಾಸ್‍ಗಳನ್ನು ಸರಬರಾಜು ಮಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು ಇಂತಹ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಯ ಗಮನಕ್ಕೆ ತರುವಂತೆ ಅವರು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಗೋವಿಂದ ರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ambedkar image

LEAVE A REPLY

Please enter your comment!
Please enter your name here