ಅಶ್ಲೀಲ ಸಿಡಿ ಪ್ರಕರಣ: ದೂರು ದಾಖಲಿಸಿದ ರಮೇಶ್ ಜಾರಕಿಹೊಳಿ

0
180

ಬೆಂಗಳೂರು ಮಾ.13: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯ್ಲಾಕ್‌ ಮೇಲ್‌ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಆಪ್ತ, ಮಾಜಿ ಶಾಸಕ ಎಂ.ವಿ. ನಾಗರಾಜ್ ಮೂಲಕ ಸದಾಶಿವ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಿಡಿ ಪ್ರಕರಣದ ವಿರುದ್ಧ ಮಾಜಿ ಶಾಸಕ ನಾಗರಾಜ್, ರಮೇಶ್ ಜಾರಕಿಹೊಳಿ ಪರವಾಗಿ ಲಿಖಿತ ದೂರು ದಾಖಲಿಸಿದ್ದು, ನಕಲಿ ಸಿಡಿ ತಯಾರಿಸಿ ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡಿ ತೇಜೋವಧೆ ಮಾಡಲಾಗಿದೆ ಎಂದು ರಮೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರುನಲ್ಲಿ ಯಾರೊಬ್ಬರ ಹೆಸರನ್ನು ದಾಖಲಿಸಿಲ್ಲ. ಬ್ಯ್ಲಾಕ್‌ ಮೇಲ್‌ ಹಾಗೂ ಪೋರ್ಜರಿ ಪ್ರಕರಣ ದಾಖಲಿಸಿದ್ದಾರೆ. ಸಿಡಿಯಲ್ಲಿರುವುದು ತಾನಲ್ಲ ಎಂದು ಹೇಳಿರುವ ರಮೇಶ್ ಜಾರಕಿಹೊಳಿ, ವಕೀಲರ ಸಲಹೆ ಮೇರೆಗೆ ಯಾರ ವಿರುದ್ಧವೂ ದೂರು ನೀಡಿಲ್ಲ ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಈಗ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದ್ದು, ಎಫ್ಐಆರ್ ದಾಖಲಿಸಿಕೊಂಡು ಎಸ್ಐಟಿ ತನಿಖೆಯನ್ನು ಚುರುಕುಗೊಳಿಸಬಹುದು.


LEAVE A REPLY

Please enter your comment!
Please enter your name here