ವಿಜಯಪುರ: ನಗರದ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವರೆಗೆ ಜಾಥಾ ನಡೆಸುವ ಮೂಲಕ ವಿಶ್ವ ಹೃದಯ ದಿನವನ್ನು ಆಚರಿಸಲಾಯಿತು.
ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಬ್ಯಾನರ್, ಪೊಸ್ಟರ್, ಪಾಂಪ್ಲೆಟ್ಸ, ಹಾಗೂ ಜಿಂಗಲ್ಸ್ ಗಳ ಮೂಲಕ ಜನರಲ್ಲಿ ಅರಿವು ಮೂಡಿಸುತ್ತಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರೆಗೆ ಜಾಥಾ ನಡೆಸಿದರು. ಕಾಯಕ್ರಮವನ್ನು ಉಪವಿಭಾಗಾಧಿಕಾರಿ ಬಲರಾಮ್ ಲಮಾಣಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜಕುಮಾರ್ ಎರಗಲ್, ಡಾ.ಎಲ್.ಎಸ್ ಬಿದರಿ, ಡಾ.ಮಲ್ಲನಗೌಡ ಬಿರಾದಾರ, ಡಾ.ಶರದ ರೂಡಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.