Vijanapura News : ಕನ್ನಡ ಸಾಹಿತ್ಯ ಪರಿಷತ್ತಿಗೆ ಐತಿಹಾಸಿಕ ಹಿನ್ನೆಲೆ: ಜಿಲ್ಲಾಧಿಕಾರಿ T ಭೂಬಾಲನ್

kannada sahitya 2024 image

ವಿಜಯಪುರ: kannada sahitya 2024 ಕನ್ನಡ ಸಾಹಿತ್ಯ ಪರಿಷತ್ತಿಗೆ ಐತಿಹಾಸಿಕ ಹಿನ್ನೆಲೆಯಿದ್ದು ನಿರಂತರ ಕನ್ನಡ ಬೆಳೆಸುವ ಸೇವೆ ಮಾಡುತ್ತಿರುವದು ಸ್ಮರಣೀಯ. ಶತಮಾನದ ಇತಿಹಾಸ ಹೊಂದಿರುವ ಕನ್ನಡ ಸಾಹಿತ್ಯ, ಸಂಸ್ಕøತಿ ಉಳಿಸುವ ಪ್ರಾಮಾಣಿಕ ಕಾರ್ಯ ಮಾಡುತ್ತಿದ್ದಾರೆ. ವಿಜಯಪುರ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಸಾಹಿತ್ಯ ಬೆಳೆಸುವಲ್ಲಿ ಪ್ರಮುಖ ಕಾರ್ಯ ಮಾಡುತ್ತಿದ್ದಾರೆಂದು ಜಿಲ್ಲಾಧಿಕಾರಿ T ಭೂಬಾಲನ ಅಭಿಪ್ರಾಯ ವ್ಯಕ್ತಪಡಿಸಿದರು. ಇಂದು ವಿಜಯಪುರದ ಶ್ರೀ ಸಿದ್ಧೇಶ್ವರ ದೇವಸ್ಥಾನ ಆವರಣದಲ್ಲಿ ಕನ್ನಡ ಜ್ಯೋತಿ ರಥ ಯಾತ್ರೆಯ ತಾಯಿ ನಾಡದೇವತೆಯ ಪೂಜಿಸಿ ಉದ್ಘಾಟಿಸಿ ಮಾತನಾಡಿ […]

Bengaluru | ಜಮ್ಮು-ಕಾಶ್ಮೀರ ಚುನಾವಣಾ ಫಲಿತಾಂಶ: ಬಿಜೆಪಿ ಗೆಲುವಿಗೆ ಕಪಾಳ ಮೋಕ್ಷ, ಸಚಿವ ಪ್ರಿಯಾಂಕ್ ಖರ್ಗೆ ಉಲ್ಲೇಖ

Jammu and Kashmir Election Result image

ಬೆಂಗಳೂರು: Jammu and Kashmir Election Result ಜಮ್ಮು-ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟಗೊಂಡಿವೆ. ಹರಿಯಾಣದಲ್ಲಿ ಚುನಾವಣೋತ್ತರ ಸಮೀಕ್ಷೆ ನಿರೀಕ್ಷೆಗೂ ಮುನ್ನ ಬದಲಾಗಿದ್ದು, ಬಿಜೆಪಿ ಅನಿರೀಕ್ಷಿತ ಗೆಲುವು ಸಾಧಿಸಿದೆ. ಜಮ್ಮು-ಕಾಶ್ಮೀರದಲ್ಲಿ ಎನ್.ಸಿ. ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಫಲಿತಾಂಶಗಳ ಕುರಿತಂತೆ ಸಚಿವ ಪ್ರಿಯಾಂಕ ಖರ್ಗೆ, “ಬಿಜೆಪಿಗೆ ಇದೊಂದು ಕಪಾಳ ಮೋಕ್ಷ,” ಎಂದು ಹೇಳಿದ್ದಾರೆ. Jammu and Kashmir Election Result ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಜಮ್ಮು-ಕಾಶ್ಮೀರದ […]

Vijayapura News | ಥಾಂಗ – ತಾ ಜೂನಿಯರ ಕ್ರೀಡಾಕೂಟ ೨೦೨೪

Thonga-Ta Junior Games image

ವಿಜಯಪುರ: 30 ನೇಯ ರಾಷ್ಟ್ರೀಯ ಥಾಂಗ – ತಾ ಜೂನಿಯರ ಕ್ರೀಡಾಕೂಟ Thonga-Ta Junior Games ದಿನಾಂಕ 5 ರಿಂದ 7 ಅಕ್ಟೋಬರ್ 2024 ರಂದು ಮಧ್ಯಪ್ರದೇಶದ ಗ್ವಾಲಿಯರ್‍ನಲ್ಲಿ ಮುಕ್ತಾಯವಾಯಿತು. ಈ ಕ್ರೀಡಾಕೂಟದಲ್ಲಿ ಸತೀಶ ಎನ್ -70 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾನೆ ಎಂದು ಕರ್ನಾಟಕ ಥಾಂಗ-ತಾ ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ, ಶ್ರೀ ಬಸವರಾಜ ನಂ ಬಾಗೇವಾಡಿ, ಸಾ, ಉತ್ನಾಳ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Vijayapura News | ಜಿಲ್ಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ […]

Vijayapura News | ವಕ್ಫ್ ಅದಾಲತ್‍ನಲ್ಲಿ ಸಲ್ಲಿಕೆಯಾದ ಅರ್ಜಿಗಳಿಗೆ ಶೀಘ್ರದಲ್ಲೇ ಪರಿಹಾರ -ಸಚಿವ ಜಮೀರ ಅಹ್ಮದ್‍ಖಾನ್

ವಿಜಯಪುರ: ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ನಮಗೆ ಒದಗಿಸಿದ ಸಂವಿಧಾನದಿಂದಲೇ ಇಂದು ನಾವು ಅತ್ಯಂತ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಪ್ರತಿಯೊಬ್ಬರಿಗೂ ತಮ್ಮ ಹಕ್ಕು ಪ್ರತಿಪಾದನೆಗೆ ಸಂವಿಧಾನ ಅವಕಾಶ ಒದಗಿಸಿದ್ದು, ವಕ್ಫ್ ಆಸ್ತಿ ಯಾವುದೇ ವೈಯಕ್ತಿಕ ಸ್ವತ್ತಲ್ಲ, ಇದು ದೇವರ ಆಸ್ತಿ ಇದರ ಸಂರಕ್ಷಣೆ ನಮ್ಮ ಹಕ್ಕು ಹಾಗೂ ಜವಾಬ್ದಾರಿಯಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಬಿ.ಜೆಡ್.ಜಮೀರ್‍ಅಹ್ಮದ ಖಾನ್ Zameera Ahmed Khan ಹೇಳಿದರು. ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ […]

Vijayapura News | ಜಿಲ್ಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ ಇಲ್ಲಿದೆ ಮಾಹಿತಿ

Kannada Jyoti Rath Yatre image

ವಿಜಯಪುರ: Kannada Jyoti Rath Yatre 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಜರುಗುತ್ತಿದ್ದು ಆ ಪ್ರಯುಕ್ತ ಜನರಲ್ಲಿ ಜಾಗೃತಿ ಹಾಗೂ ಪ್ರೇರಣೆ ನೀಡುವದಗೋಸ್ಕರ ಜಿಲ್ಲೆಯಲ್ಲಿ ಕನ್ನಡ ಜ್ಯೋತಿ ರಥ ಜಿಲ್ಲೆಯಲ್ಲಿ ಸಂಚರಿಸಲಿದೆ. ಮಂಗಳವಾರ ದಿನಾಂಕ 8-10-2024 ರಂದು ಮುಂಜಾನೆ  9-00 ಗಂಟೆಗೆ ನಿಡಗುಂದಿ ಪಟ್ಟಣದಲ್ಲಿ ಭವ್ಯ ಮೆರವಣಿಗೆಯನ್ನು ಸಚಿವ ಶಿವಾನಂದ ಪಾಟೀಲರು ಉದ್ಘಾಟಿಸಿ ಜಿಲ್ಲೆಗೆ ಸ್ವಾಗತಿಸಲಾಗುವುದು. ಮುಂಜಾನೆ  11-45 ಬಸವನಬಾಗೇವಾಡಿ ಮೆರವಣಿಗೆಯಲ್ಲಿ ಸಚಿವ ಶಿವಾನಂದ ಪಾಟೀಲರು ಭಾಗವಹಿಸಲಿದ್ದಾರೆ. ಮ. 12-30 ಗಂಟೆಗೆ ಮನಗೂಳಿ, […]

Vijayapura News | ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ದಿವ್ಯಾಂಗರಿಂದ ಪ್ರತಿಭಟನೆ

ವಿಜಯಪುರ: ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ವಿಜಯಪುರ ಸಮಿತಿ ಹಾಗೂ ಅಂಗವಿಕಲರಿಗಾಗಿ ಶ್ರಮಿಸುತ್ತಿರುವ ವಿವಿಧ ಸಂಘ ಸಂಸ್ಥೆಗಳ ಸಂಯೋಗದೊಂದಿಗೆ ಜಿಲ್ಲಾಧ್ಯಕ್ಷರಾದ ವಿನೋದ ಖೇಡ ಇವರ ನೇತೃತ್ವದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗವಿಕಲರಿಗೆ Divyanga ಕಡೆಗಣಿಸಿದ ಕುರಿತು ಮತ್ತು ವಿವಿಧ ಬೇಡಿಕೆಗಳಗೋಸ್ಕರ ಇಂದು ನಗರದ ಡಾ| ಅಂಬೇಡ್ಕರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟನೆ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ರಂಗರಪ್ಪ ದಾಸರ ಇವರು […]

Bagalkote News | ಬೆಳ್ಳಿ ಬೆಳಕು – ಅಕ್ಕಸಾಲಿಕೆ ಗ್ರಂಥ ಲೋಕಾರ್ಪಣೆ

ಬಾಗಲಕೋಟೆ: Granth Lokarpane ವಿಶ್ವಕರ್ಮ ಸಮಾಜದ ಬಗ್ಗೆ ಸಾಕಷ್ಟು ಸಾಹಿತ್ಯ ಭಂಡಾರವಿದ್ದು ಅದು ಸಮಗ್ರ ಸಾಹಿತ್ಯ ಸಂಪೂಟದ ಅವಶ್ಯಕತೆ ಇದೆ ಎಂದು ವಿದ್ಯಾಗಿರಿಯ ವಿಶ್ವಕರ್ಮ ಸಮಾಜ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ವಿ.ಎನ್.ಕಮ್ಮಾರ ಹೇಳಿದರು. ಅವರು ನಗರದ ಕಾಳಿಕಾದೇವಿ ದೇವಸ್ಥಾನದಲ್ಲಿ ವಿಶ್ವಕರ್ಮ ಸಾಹಿತ್ಯ ಪ್ರಚಾರ ಸಮಿತಿ ಹುಬ್ಬಳ್ಳಿ, ವಿಶ್ವಕರ್ಮ ಸಮಾಜ ಸಂಘ ಬಾಗಲಕೋಟೆ ಇವರ ಸಹಯೋಗದಲ್ಲಿ ವಿಶ್ವಕರ್ಮ ಸಾಹಿತ್ಯ ಪ್ರಚಾರ ಸಮಿತಿ ಇದರ ರಜತಮಹೋತ್ಸವ ಸಂಭ್ರಾಚರಣೆಯ ಅಂಗವಾಗಿ ಗ್ರಂಥ ಲೋಕಾರ್ಪಣೆ ಸಮಾರಂಭವನ್ನು ಜ್ಯೋತಿ ಬೇಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. […]

Vijayapura News | ಸಚಿವ ಜಮೀರ ಅಹಮದ ಖಾನ್‍ಗೆ ಅಭಿಮಾನಿಗಳಿಂದ ಸನ್ಮಾನ

Jamira Ahmad Khan image

ವಿಜಯಪುರ: ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಸಚಿವರಾದ ಜಮೀರ ಅಹಮದ ಖಾನ Jamira Ahmad Khan ಅವರು ವಿಜಯಪುರಕ್ಕೆ ವಕ್ಫ್  ಅದಾಲತ್ ಕಾರ್ಯಕ್ರಮಕ್ಕೆ ಆಗಮಿಸಿರುವ ವೇಳೆ ಗಣೇಶ ನಗರದ 21 ನೇ ವಾರ್ಡಿನ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಅವರನ್ನು ಸ್ವಾಗತಿಸಿ ಸನ್ಮಾನಿಸಿ ಗೌರವಿಸಿದರು. ಇಬ್ರಾಹಿಂಪುರದ ಸ್ಲಂ ನಿವಾಸಿ ಮಹಿಳೆಯರು ಸುಮಾರು ವರ್ಷಗಳಿಂದ ಇಲ್ಲಿಯೇ ವಾಸವಿದ್ದು ಕೂಲಿ ನಾಲಿ ಮಾಡಿ ಜೀವನ ಸಾಗಿಸುತ್ತಿದ್ದು, ಸರಕಾರದ ಯಾವುದೇ ಯೋಜನೆ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ, ನಮ್ಮ ಜೀವನಕ್ಕೆ ನಿರ್ದಿಷ್ಟವಾದ ಸೂರು ಇಲ್ಲದೇ […]

Vijayapura News | ಎಸ್ ಎಸ್ ಕಾಲೇಜಿನ ಬಾಲಕಿಯರು ಖೋ ಖೋ ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

s s college vijayapura image

ವಿಜಯಪುರ: s s college vijayapura ಪದವಿ ಪೂರ್ವ ಶಿಕ್ಷಣ ಇಲಾಖೆ ವಿಜಯಪುರ ಹಾಗೂ ರೂಪಾದೇವಿ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿಗಳು ಇಂದು ಸೋಮವಾರ ನಗರದ ದರ್ಬಾರ್ ಕಾಲೇಜು ಮೈದಾನದಲ್ಲಿ ನಡೆದವು ಇದರಲ್ಲಿ ಎಸ್ಎಸ್ ಪದವಿಪೂರ್ವ ಕಾಲೇಜನ ಬಾಲಕಿಯರು ಫೈನಲ್ ಪಂದ್ಯದಲ್ಲಿ ನಿಡಗುಂದಿ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಗಣಿ ತಂಡವನ್ನು 12-0 ಅಂಕದೊಂದಿಗೆ […]

Bagalkote News | ಎಚ್.ಐ.ವಿ/ಏಡ್ಸ್ ಜಾಗೃತಿಗಾಗಿ ಕಬಡ್ಡಿ ಪಂದ್ಯಾವಳಿ ಕಬಡ್ಡಿ ಪಂದ್ಯಾವಳಿಗೆ ಜಿಲ್ಲಾಧಿಕಾರಿ ಜಾನಕಿ ಚಾಲನೆ

ಬಾಗಲಕೋಟೆ:Kabaddi for AIDS awareness ಎಚ್.ಐ.ವಿ/ಏಡ್ಸ್ ಜಾಗೃತಿ ಅಂಗವಾಗಿ 18 ರಿಂದ 25 ವಯಸ್ಸಿನ ಪದವಿ, ಸ್ನಾತಕೋತ್ತರ, ವೃತ್ತಿಪರ ಕಾಲೇಜು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಅಂತರ ಕಾಲೇಜು ಕಬಡ್ಡಿ ಪಂದ್ಯಾವಳಿಗೆ ಜಿಲ್ಲಾಧಿಕಾರಿ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ, ಕ್ರೀಡಾ ಇಲಾಖೆ, ರೆಡ್ ರಿಬ್ಬನ್ ಕ್ಲಬ್ ಹಾಗೂ ಬಸವೇಶ್ವರ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ […]