Bagalkote News | ಕನ್ನಡ ಉಳಿಸಿ, ಬೆಳೆಸುವ ಕೆಲಸವಾಗಲಿ : ಡಿಸಿ ಜಾನಕಿ

ಬಾಗಲಕೋಟೆ: Kannada Jyoti Rath Yatra ಹುಟ್ಟಿನಿಂದಲೂ ನಾವು ಕನ್ನಡಿಗರಾಗಿದ್ದು, ನಮ್ಮ ಉಸಿರು ಇರುವವರೆಗೂ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಗೆ ಆಗಮಿಸಿರುವ ಕನ್ನಡ ಜ್ಯೊತಿ ರಥಯಾತ್ರೆ ಸೋಮವಾರ ಜಿಲ್ಲಾಡಳಿತಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ಕನ್ನಡ ಜ್ಯೋತಿಯನ್ನು ಬೆಳೆಗಿಸಿ ಮಾತನಾಡಿದ ಅವರು ಕನ್ನಡ ನಮಗೆಲ್ಲ ಕೊಟ್ಟಿದೆ. ನಾವು ಏನು ಕೊಟ್ಟಿದ್ದೇವೆ ಎಂದು ಕನ್ನಡಿಗರು ಅರ್ಥ ಮಾಡಿಕೊಂಡು ಕನ್ನಡ […]
Vijayapura News | ಗಾಂಧೀಜಿಯವರ ತತ್ವಗಳು ಸಾರ್ವಕಾಲಿಕ : ಬಾಪುಗೌಡ ಪಾಟೀಲ ಅಭಿಮತ

ವಿಜಯಪುರ: District Kannada literature ಅಹಿಂಸೆಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಕೀರ್ತಿ ಮಹಾತ್ಮಾ ಗಾಂಧೀಜಿಯವರಿಗೆ ಸಲ್ಲುತ್ತದೆ. ದತ್ತಿ ಗೋಷ್ಠಿಯ ಮೂಲಕ ಇಂದು ಗಾಂಧೀಜಿಯವರ ಚಿಂತನೆಗಳನ್ನು ಕುರಿತು ಅತ್ಯಂತ ಮಾರ್ಮಿಕವಾದ ಉಪನ್ಯಾಸವನ್ನು ಏರ್ಪಡಿಸಿ ದತ್ತಿಗೋಷ್ಠಿಗಳಿಗೆ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಜಿಲ್ಲೆಯಲ್ಲಿ ಒಳ್ಳೆಯ ಸಾಹಿತ್ಯಕ ಮತ್ತು ಸಾಂಸ್ಕøತಿಕ ವಾತಾವರಣವನ್ನು ನಿರ್ಮಿಸುವ ಮೂಲಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯವಾದದ್ದು ಎಂದು ಖಾದಿ ಗ್ರಾಮೋದ್ಯೋಗ ಸಂಸ್ಥೆಯ ಮಾಜಿ ರಾಜ್ಯಾಧ್ಯಕ್ಷರಾದ ಬಾಪುಗೌಡ ಪಾಟೀಲ ಅಭಿಪ್ರಾಯಪಟ್ಟರು. ಜಿಲ್ಲಾ ಕನ್ನಡ ಸಾಹಿತ್ಯ […]
Vijayapura News : ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ಸಿಬ್ಬಂದಿಗಳ ಕುಂದುಕೊರತೆ ಬಗ್ಗೆ ರಾಜ್ಯಮಟ್ಟದ ಕಾರ್ಯಾಗಾರ

ವಿಜಯಪುರ: Hostel and Residential School ಜಿಲ್ಲಾ ಪಂಚಾಯತ, ವಿಜಯಪುರ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕ್ರೈಸ್ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಅಡುಗೆ ಸಿಬ್ಬಂದಿಗಳಿಗೆ ಪುನಶ್ಚೇತನ ಕಾರ್ಯಾಗಾರವು ವಿಜಯಪುರ ನಗರ ಬುದ್ದವಿಹಾರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದನ್ನೂ ಓದಿ: Vijayapura News : ಸನಸೈನ್ ಪ್ರೊಡೆಕ್ಷನ್ & ನೃತ್ಯ ತಂಡದಿಂದ ದಾಂಡಿಯಾ – ಗರಬಾ […]
Vijayapura News : ಸನಸೈನ್ ಪ್ರೊಡೆಕ್ಷನ್ & ನೃತ್ಯ ತಂಡದಿಂದ ದಾಂಡಿಯಾ – ಗರಬಾ ಕಾರ್ಯಕ್ರಮ ಆಯೋಜನೆ

ವಿಜಯಪುರ: sunshine production ಸನ್ಸೈನ್ ಪ್ರೊಡೆಕ್ಷನ್ & ನೃತ್ಯ ತಂಡದ ವತಿಯಿಂದ ದಾಂಡಿಯಾ- ಗರಬಾ & ಬಾಲಿವುಡ್ ಡಿಜೆ ನೈಟ್ಸ್ ಕಾರ್ಯಕ್ರಮವನ್ನು ದಿನಾಂಕ : 5 ಮತ್ತು 6 ನೇ ತಾರೀಖಿನಂದು ಸಾಯಂಕಾಲ 6.00 ಗಂಟೆಗೆ ನಡೆಯಲಿದೆ. ನಗರದ ಆಶ್ರಮ ರೋಡ, ಐಶ್ವರ್ಯ ನಗರ, ನೀಲಾ ನಗರ, ವಿಜಯಪುರದ ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಈ ಸಾಂಸ್ಕøತಿಕ ಕಾರ್ಯಕ್ರಮವನ್ನು ಮಲ್ಲಾರಿ ವಾಯದಂಡೆ ಇವರು ಆಯೋಜನೆ ಮಾಡಿದ್ದಾರೆ. ಪುರಾತನ ಕಾಲದ ಸಂಪ್ರದಾಯ ಹಾಗೂ ಭಾರತ ದೇಶದ ಪರಂಪರೆಯನ್ನು ಉಳಿಸಿ […]
Vijayapura News : ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಖಂಡಿಸಿ ಹೋರಾಟ

ವಿಜಯಪುರ: ನಾಗಠಾಣ ಮತಕ್ಷೇತ್ರದ ಮಾಜಿ ಶಾಸಕರಾದ ದೇವಾನಂದ ಚವ್ಹಾಣ ನೇತೃತ್ವದಲ್ಲಿ ಲೋಕಾಯುಕ್ತ ಎ.ಡಿ.ಜಿ.ಪಿ. ಚಂದ್ರಶೇಖರ ADGP Chandrasekhara ಕೇಂದ್ರ ಸರಕಾರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಕಬ್ಬಿಣ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಖಂಡಿಸಿ ಅವರನ್ನು ಅಮಾನತುಗೊಳಿಸಲು ಆಗ್ರಹಿಸಿ ತಹಶೀಲ್ದಾರ ಮುಖಾಂತರ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಜಾತ್ಯಾತೀತ ಜನತಾದಳ ವಿಜಯಪುರ ತಾಲೂಕಾ ಅಧ್ಯಕ್ಷರಾದ ನಿಂಗನಗೌಡ ಎಸ್. ಸೋಲಾಪೂರ ಮಾತನಾಡಿ ಕೇಂದ್ರ ಸರಕಾರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಕಬ್ಬಿಣ ಸಚಿವರಾದ […]
Vijayapura News : ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ

ವಿಜಯಪುರ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ವಿಜಯಪುರ ಜಿಲ್ಲಾ ಪ್ರಾಥಮಿಕ ಶಾಲೆ ಮತ್ತು ಬಬಲೇಶ್ವರ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬಬಲೇಶ್ವರ ಶ್ರೀ ಬಾಪೂಜಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಶಿಕ್ಷಕರ ದಿನೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಜರುಗಿತು. ಡಾ. ಸರ್ವಪಲ್ಲಿ ರಾಧಾಕೃಷ್ಣನರವರ ಭಾವಚಿತ್ರದ ಮೆರವಣಿ ಬಬಲೇಶ್ವರ ಮಹಾತ್ಮಾ ಗಾಂಧಿ ವೃತ್ತದಿಂದ ಮೆರವಣಿಗೆ ವಿದ್ಯಾರ್ಥಿನಿಯರು ಡೊಳ್ಳು […]
Vijayapura News : ವಿಠ್ಠಲ ಎಮ್. ಗಣಿ ಹೃದಯಸ್ಪರ್ಶಿ ಅಭಿನಂದನ ಸಮಾರಂಭ

ವಿಜಯಪುರ: ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ (managoli) ಪಟ್ಟಣದ ಕ್ರೀಯಾಶೀಲ ಶಿಕ್ಷಕರಾದ ವಿಠ್ಠಲ ಎಮ್. ಗಣಿ ಕೌಟಿಲ್ಯ ಶಿಕ್ಷಣ ಸಂಸ್ಥೆ ಇವರಿಗೆ ಜನಸಿರಿ ಪ್ರತಿಷ್ಠಾನ ಬೆಂಗಳೂರು ವತಿಯಿಂದ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಶಿಕ್ಷಕರ ಹಬ್ಬ-2024 ಸಮಾರಂಭದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಜಯಪುರ ಜಿಲ್ಲೆಯ ಬ.ಬಾಗೇವಾಡಿ ತಾಲೂಕಿನ ಮನಗೂಳಿಯ ಕೌಟಿಲ್ಯ ಶಿಕ್ಷಣ ಸಂಸ್ಥೆ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಗ್ರಾಮದ ಗಣ್ಯರು ಸಸಿಗೆ ನೀರುಣಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸೃಷ್ಟಿ ಕಾರಜೋಳ 9ನೇ […]
Vijayapura News : ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ ಅರಿವು ಮೂಡಿಸಿದ ಲೊಯೋಲ ಕೈಗಾರಿಕಾ ತರಬೇತಿ ಸಂಸ್ಥೆ

ವಿಜಯಪುರ : ನಗರದ ಉಕ್ಕಲಿ ರಸ್ತೆಯಲ್ಲಿರುವ ಲೊಯೋಲ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ Loyola Industrial Training Institute ಗಾಂಧಿ ಜಯಂತಿಯ ನಿಮಿತ್ತ್ಯವಾಗಿ ಶಿವಗಿರಿಯಿಂದ ಸಿಂದಗಿ ಬೈಪಾಸ ವರೆಗೆ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು. ಪ್ರಾಚಾರ್ಯರಾದ ಫಾದರ. ಆಂಟೋನಿ ಲಾರೆನ್ಸರವರು ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಭೋದಿಸಿ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ ಹಾಗೂ ಆರೋಗ್ಯಕರ ಪರಿಸರವನ್ನು ನಿರ್ಮಾಣ ಮಾಡುವಂತೆ ಎಲ್ಲಾ ವಿದ್ಯಾರ್ಥಿಗಳಲ್ಲಿ ಸ್ವಚ್ಛತಾ ಅರಿವನ್ನು ಮೂಡಿಸಿದರು. Loyola Industrial Training Institute ಈ ಅಭಿಯಾನದಲ್ಲಿ ಎಲ್ಲಾ ಸಿಬ್ಬಂದಿಗಳು ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು […]
ರಾಜೀನಾಮೆ ಕೊಡಲು ಸಾಧ್ಯವೇ? | ಸಿದ್ದರಾಮಯ್ಯ ಬೆಂಬಲಿಸಿದ ಜೆಡಿಎಸ್ ಹಿರಿಯ ಶಾಸಕರ ಪ್ರಶ್ನೆ…!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಬದಲಿ ನಿವೇಶನ ವಿವಾದಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರ ರಾಜೀನಾಮೆ ಬೇಡ ಎಂದು ಬಿಜೆಪಿ-ಜೆಡಿಎಸ್ ನಾಯಕರು ಆಗ್ರಹಿಸಿದ್ದಾರೆ. ಆದರೆ, ಜೆಡಿಎಸ್ ಕೋರ್ ಕಮಿಟಿ ಸಂಚಾಲಕ ಹಾಗೂ ಹಿರಿಯ ಶಾಸಕ ಜಿಟಿ ದೇವೇಗೌಡ GT Deve Gowda ಅವರು ಸಿಎಂ ಅವರ ಬೆಂಬಲಕ್ಕೆ ನಿಂತಿದ್ದು, “136 ಸ್ಥಾನ ಗೆದ್ದವರು ರಾಜೀನಾಮೆ ಕೊಡಲು ಸಿದ್ಧರಾಗಬೇಕೆ?” ಎಂದು ಪ್ರತಿಯಾಗಿ ಕೇಳಿದ್ದಾರೆ. ಪ್ರಸ್ತುತ, ರಾಜ್ಯದಲ್ಲಿ ಮುಡಾ ಪ್ರಕರಣದ ಮೇಲೆ ಭಾರೀ ಚರ್ಚೆ ನಡೆಯುತ್ತಿದೆ. ಮೈಸೂರಿನ ದಸರಾ ಉದ್ಘಾಟನೆಯಲ್ಲಿ […]
₹50 ಕೋಟಿ ಹಣ ನೀಡಲು ಬೆದರಿಕೆ | ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಉದ್ಯಮಿಯಿಂದ ದೂರು

“ಚುನಾವಣಾ ಖರ್ಚಿಗೆ ಐವತ್ತು ಕೋಟಿ ರೂಪಾಯಿ ನೀಡುವಂತೆ ಒತ್ತಡ ಹೇರಲು ಬೆದರಿಕೆ ಹಾಕಲಾಗಿದೆ” ಎಂದು ಆರೋಪಿಸಿರುವ ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದ ಉಪಾಧ್ಯಕ್ಷ ವಿಜಯ್ ಟಾಟಾ, ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ Union Minister HD Kumaraswamy ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೇಂಗಳೂರಿನ ಅಮೃತಹಳ್ಳಿಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ನೀಡಿರುವ ವಿಜಯ್ ಟಾಟಾ, “ನಾನು ಉದ್ಯಮಿಯಾಗಿದ್ದು, ವ್ಯವಹಾರದಲ್ಲಿ ಮುನ್ನಡೆ ಸಾಧಿಸುತ್ತಿದ್ದೇನೆ. ಆದರೆ ಕುಮಾರಸ್ವಾಮಿ […]