ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನಕ್ಕೆ ಚಾಲನೆ | ಪ್ರತಿಜ್ಞಾವಿಧಿ ಬೋಧನೆ ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿ : ಸಂಸದ ಪಿ.ಸಿ.ಗದ್ದಿಗೌಡರ

ಬಾಗಲಕೋಟೆ : ಪರಿಸರ ಸ್ವಚ್ಛವಾಗಿದ್ದರೆ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತಿದ್ದು, Swachhta Hee Seva Special Movement launched ಸ್ವಚ್ಛತೆ ಕಾರ್ಯಕ್ಕೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು. ಐಹೊಳೆ ಸ್ಮಾರಕಗಳ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡ ಸೆಪ್ಟೆಂಬರ 17 ರಿಂದ ಅಕ್ಟೋಬರ 2 ವರೆಗೆ ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಈ […]
ಎರಡನೇ ಡೋಸ್ ಹಾಕಿಸಿಕೊಳ್ಳಲು 12 ವಾರಗಳ ನಂತರ ಲಸಿಕೆ ಕೇಂದ್ರಕ್ಕೆ ಬಗ್ಗೆ : ರಾಜ್ಯ ಸರಕಾರ

ಬೆಂಗಳೂರು ಮೇ 15: ಮೊದಲ ಡೋಸ್ ಲಸಿಕೆ ಪಡೆದವರು 12 ವಾರಗಳವರೆಗೆ ಲಸಿಕೆ ಕೇಂದ್ರಕ್ಕೆ ಬಾರದಂತೆ ರಾಜ್ಯ ಸರ್ಕಾರ ಹೇಳಿದೆ, ತಜ್ಞರು ನೀಡಿರುವ ಸಲಹೆಯನ್ನು ಉಲ್ಲೇಖಿಸಿರುವ ರಾಜ್ಯ ಸರ್ಕಾರದ ಲಸಿಕಾ ಅಭಿಯಾನದ ನಿರ್ದೇಶಕರು, “ಬದಲಾದ ನಿಯಮಗಳ ಪ್ರಕಾರ ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದವರಿಗೆ 12-16 ವಾರಗಳ ಅಂತರದಲ್ಲಿ ಎರಡನೇ ಡೋಸ್ ನೀಡಬಹುದಾಗಿದೆ ಎಂದು ರೋಗನಿರೋಧಕ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್ ಟಿಎಜಿಐ) ಲಸಿಕೆ ಸಂಬಂಧ ರಾಷ್ಟ್ರೀಯ ತಜ್ಞರ ಗುಂಪು (ಎನ್ಇಜಿವಿಎಸಿ) ತಿಳಿಸಿದೆ. 6-8 ವಾರಗಳಲ್ಲಿ […]
ಈ ವರ್ಷ ಶಾಲೆಗಳನ್ನು ತೆರೆಯುವುದು ಬೇಡ :ಬರಡೋಲ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಪದಾಧಿಕಾರಿ ಶ್ರೀಮತಿ ಭಾರತಿ ಸಿ. ಕಟ್ಟಿಮನಿ

ವಿಜಯಪುರ ನ.05: ಇತ್ತೀಚೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಮಾನ್ಯ ಶಿಕ್ಷಣ ಸಚಿವರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ಜಂಟಿ ಕಾರ್ಯದರ್ಶಿಗಳು ಹಾಗೂ ಖಾಸಗಿ ಶಾಲಾಡಳಿತ ಮಂಡಳಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ವರದಿಯನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿರುತ್ತದೆ. ಆದರೆ ನಾನು ವಯಕ್ತಿಕವಾಗಿ ಈ ವರ್ಷ ಶಾಲೆಗಳನ್ನು ತೆರೆಯುವುದು ಬೇಡ ಎಂದು ಬರಡೋಲ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಪದಾಧಿಕಾರಿಗಳಾದ ಶ್ರೀಮತಿ ಭಾರತಿ ಸಿ. ಕಟ್ಟಿಮನಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಆನ್ಲೈನ್ ಕ್ಲಾಸ್ ಮಾಡಿ ಎಲ್ಲರನ್ನು […]
ಮ್ಯಾಟ್ರಿಮೊನಿಯಲ್ಲಿ ಹಣ ಕಳೆದುಕೊಂಡ ಹಾಸನದ ಹುಡುಗ

ಹಾಸನ: ಜೀವನ ಸಂಗಾತಿಗಾಗಿ ಹುಡುಕುತ್ತಿದ್ದವನಿಗೆ ಮ್ಯಾಟ್ರಿಮೊನಿಯಲ್ಲಿ ಪರಿಚಯವಾದ ಹುಡುಗಿಯನ್ನು ಕಂಡು ಮದುವೆಯಾದರೆ ಈಕೆಯನ್ನೇ ಮದುವೆಯಾಗಬೇಕು ಅಂತ ಆತ ನಿರ್ಧರಿಸಿಬಿಟ್ಟಿದ್ದ. ಆದರೆ ಬದಲಾಗಿ ಆಕೆ ಮಾತ್ರ ಮಾಡಿದ್ದು ಮಾತ್ರ ಮಹಾಮೋಸ. ಆ ಮಹಿಳೆ ಹೆಸರು ಲಕ್ಷ್ಮಿ. ಹಾಸನ ಮೂಲದ 40 ವರ್ಷದ ಅವಿವಾಹಿತ ಪರಮೇಶ್ಗೆ ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿದ್ದ ಹುಡುಗಿ ಲಕ್ಷ್ಮೀ. ನಂತರ ಇಬ್ಬರೂ ಬೆಂಗಳೂರಿನ ಯಲಹಂಕದಲ್ಲಿ ಭೇಟಿಯಾಗಿ ಮದುವೆ ಮಾತುಕತೆ ಕೂಡ ನಡೆಸಿಕೊಂಡಿರುತ್ತಾರೆ. ಪರಮೇಶನನ್ನ ಭೇಟಿಯಾದ ದಿನವೇ ಲಕ್ಷ್ಮೀ ತಾನೊಬ್ಬ ಅನಾಥೆ. ಐಟಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ತಾನು […]
ಹುತಾತ್ಮ ಕರ್ನಲ್ ಸಂತೋಷ ಕುಟುಂಬಕ್ಕೆ 5 ಕೋಟಿ ಪರಿಹಾರ ಘೋಷಿಸಿದ ತೆಲಂಗಾಣ ಸಿಎಂ ಚಂದ್ರಶೇಖರ ರಾವ್

ಹೈದರಾಬಾದ್ ಜೂನ್.20: ಲಡಾಖನ ಗಲ್ವಾನ್ ಗಡಿಯಲ್ಲಿ ಭಾರತ ಚೀನಾ ನಡುವೆ ಸಂಭವಿಸಿದ ಸಂಘರ್ಷದಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ ಬಾಬು ಅವರ ಕುಟುಂಬಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ 5 ಕೋಟಿ ಪರಿಹಾರ ಹಾಗೂ ಸಂತೋಷ ಬಾಬುರವರ ಪತ್ನಿಗೆ ಸರಕಾರಿ ಕೆಲಸ ನೀಡುವುದಾಗಿ ಘೋಷಿಸಿದ್ದಾರೆ. ಹುತಾತ್ಮ ಸಂತೋಷ ಬಾಬು ಅವರ ಮನೆಗೆ ಸಿಎಂ ಚಂದ್ರಶೇಖರ ರಾವ್ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿ ಜೊತೆಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಇತರ 19 ಹುತಾತ್ಮ ಯೋಧರ ಕುಟುಂಬಸ್ಥರಿಗೆ ತಲಾ […]
ಯೋಗಾ ಆ್ಯಟ್ ಹೋಮ್, ಯೋಗಾ ವಿಥ್ ಫ್ಯಾಮೀಲಿ

ವಿಜಯಪುರ ಜೂನ್ 19: ಕೊರೊನಾ ಹಾವಳಿಯ ಹಿನ್ನಲೆಯಲ್ಲಿ ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ನಿರ್ದೇಶನದಂತೆ ಇದೇ ಜೂನ 21 ರಂದು ಆಚರಿಸಲಾಗುವ ವಿಶ್ವ ಯೋಗ ದಿನವನ್ನು ಮನೆಯಲ್ಲಿಯೇ ಸಕ್ರೀಯವಾಗಿ ಭಾಗವಹಿಸಿ ಆಚರಿಸುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜೂನ 21 ರಂದು ಆಚರಿಸಲಾಗುವ ವಿಶ್ವ ಯೋಗ ದಿನವನ್ನು ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ‘’ಮನೆಯಲ್ಲೇ ಯೋಗ, ಕುಟುಂಬದೊಂದಿಗೆ ಯೋಗ’’(ಯೋಗಾ ಆ್ಯಟ್ ಹೋಮ್, ಯೋಗಾ ವಿಥ್ ಫ್ಯಾಮೀಲಿ)’’ ಎನ್ನುವ […]
ಪತ್ನಿ ಶೀಲ ಶಂಕಿಸಿ ಕೊಲೆಗೈದ ಪತಿರಾಯ: ಪೊಲೀಸರಿಗೆ ತಾನೆ ಶರಣಾದ

ಹಾಸನ ಜೂ.13: 16 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಲೋಹಿತ್ಕುಮಾರ ಮತ್ತು ನಯನ ಹಾಸನ ಜಿಲ್ಲೆಯ ಎಸ್.ಎಂ.ಕೃಷ್ಣ ಬಡಾವಣೆಯಲ್ಲಿ ವಾಸವಾಗಿದ್ದರು. ಇಬ್ಬರ ನಡುವೆ ಜಗಳ ಮಾಮೂಲಿಯಾಗಿತ್ತು. ಸಂಬಂಧಿಕರು ಹಲವು ಬಾರಿ ಬುದ್ಧಿವಾದ ಹೇಳಿ ರಾಜಿ ಮಾಡಿಸಿದ್ದರು. ಆದರೆ ಲೋಹಿತ್ಕುಮಾರ ಪತ್ನಿಯ ಶೀಲ ಶಂಕಿಸಿ ಮನೆಯಲ್ಲಿ ಯಾವಾಗಲೂ ಜಗಳ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಇಬ್ಬರ ಜಗಳ ತಾರಕಕ್ಕೇರಿದೆ. ಲೋಹಿತ್ಕುಮಾರ ತನ್ನ ಹೆಂಡತಿಯನ್ನು ಆಕೆಯ ವೇಲಿನಿಂದಲೇ ಕುತ್ತಿಗೆಗೆ ಬಲವಾಗಿ ಬಿಗಿದು ಉಸಿರು ಕಟ್ಟಿಸಿ ಕೊಲೆಮಾಡಿದ್ದಾನೆ. ನಂತರ ತಾನೆ […]
ಮಾಜಿ ಮುಖ್ಯಮಂತ್ರಿ ಜಯಲಲಿತಾರ 900 ರೂ. ಕೋಟಿ ಆಸ್ತಿ ಯಾರ ಪಾಲಿಗೆ!

ಚನ್ನೈ ಮೇ. 28: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾರ 900 ರೂ. ಕೋಟಿ ಮೌಲ್ಯದ ಆಸ್ತಿಗೆ ಅವರ ಬಂಧುಗಳಾದ ಸೋದರ ಸೊಸೆ ಜೆ.ದೀಪಾ ಹಾಗೂ ಸೋದರ ಅಳಿಯ ಜೆ.ದೀಪಕ್ ‘ಕಾನೂನುಬದ್ಧ ವಾರಸುದಾರರು’ ಎಂದು ಮದ್ರಾಸ್ ಹೈಕೋರ್ಟ್ ಪರಿಗಣಿಸಿದೆ. ಜಯಾಲಲಿತಾರ ಸಾವಿನ ನಂತರ ಅವರ ಆಸ್ತಿಯನ್ನು ಗೆಳತಿ ಶಶಿಕಲಾ ಅನುಭವಿಸುತ್ತಿದ್ದರು. ಇದನ್ನು ಪ್ರಶ್ನಿಸಿ ಜಯಾರ ಸೋದರ ಅಳಿಯ ಹೈಕೋರ್ಟ್ ಮೇಟ್ಟಿಲೇರಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್ ಕಿರುಬಾಕರನ್ ಹಾಗೂ ನ್ಯಾಯಮೂರ್ತಿ ಅಬ್ದುಲ್ ಖೂದ್ದಸ್ ಅವರ ಪೀಠ […]
ಐದನೇ ಹಂತದ ಲಾಕ್ ಡೌನ್ ಜಾರಿಯಾಗುತ್ತಾ ?

ದೇಶದಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮಕ್ಕಳು, ಹಿರಿಯರು, ವಯಸ್ಕರು ಹೀಗೆ ಯಾರನ್ನೂ ಬಿಡದೆ ತನ್ನ ಸುಳಿಗೆ ಸೆಳೆಯುತ್ತಿದೆ ಕೊರೋನಾ ಎಂಬ ಮಹಾ ವೈರಸ್. ಈ ವೈರಸನ್ನು ಕಟ್ಟಿಹಾಕಲು ಇಡೀ ದೇಶವನ್ನೇ ನಾಲ್ಕು ಸಲ ಲಾಕ್ ಡೌನ್ ಮಾಡಿದರೂ ವೈರಸ್ ನಿಂದ ತಪ್ಪಿಸಿಕೊಳ್ಳಲು ಹರಸಾಹಸ ಮಾಡುವಂತಾಗಿದೆ ದೇಶದ ಜನ. ಮೇ 31 ಕ್ಕೆ ನಾಲ್ಕನೇ ಲಾಕ್ ಡೌನ್ ಅಂತ್ಯವಾಗಬೇಕಿದೆ. ಲಾಕ್ ಡೌನ್ ಸಮಯದಲ್ಲಿ ಒಂದು ಹಂತಕ್ಕೆ ಇದ್ದ ಸೋಂಕಿತರ ಸಂಖ್ಯೆ, ಲಾಕ್ ಡೌನ್ ಸ್ವಲ್ಪ ಸಡಿಲಿಕೆಯಾದ […]
ವೈದ್ಯರಿಗೆ ಥ್ಯಾಂಕ್ಸ್ ಹೇಳಿದ ಸಾಲುಮರದ ತಿಮ್ಮಕ್ಕ

ಹಾಸನ. ಮೇ.23: ಮರಗಳನ್ನೇ ತನ್ನ ಉಸಿರಾಗಿಸಿಕೊಂಡಿರುವ, ಪರಿಸರ ಕಾಳಜಿ ಹೊಂದಿರುವ ಸಾಲುಮರದ ತಿಮ್ಮಕ್ಕನವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ವಾಂತಿ, ಭೇದಿ, ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿದ್ದ ತಿಮ್ಮಕ್ಕನವರನ್ನು ಗುರುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾಲುಮರದ ತಿಮ್ಮಕ್ಕನವರ ಆರೋಗ್ಯ ಚೇತರಿಸಿದ್ದು. ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ.