ಮಾಜಿ ಮುಖ್ಯಮಂತ್ರಿ ಜಯಲಲಿತಾರ 900 ರೂ. ಕೋಟಿ ಆಸ್ತಿ ಯಾರ ಪಾಲಿಗೆ!

ಚನ್ನೈ ಮೇ. 28: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾರ 900 ರೂ. ಕೋಟಿ ಮೌಲ್ಯದ ಆಸ್ತಿಗೆ ಅವರ ಬಂಧುಗಳಾದ ಸೋದರ ಸೊಸೆ ಜೆ.ದೀಪಾ ಹಾಗೂ ಸೋದರ ಅಳಿಯ ಜೆ.ದೀಪಕ್ ‘ಕಾನೂನುಬದ್ಧ ವಾರಸುದಾರರು’ ಎಂದು ಮದ್ರಾಸ್ ಹೈಕೋರ್ಟ್ ಪರಿಗಣಿಸಿದೆ. ಜಯಾಲಲಿತಾರ ಸಾವಿನ ನಂತರ ಅವರ ಆಸ್ತಿಯನ್ನು ಗೆಳತಿ ಶಶಿಕಲಾ ಅನುಭವಿಸುತ್ತಿದ್ದರು. ಇದನ್ನು ಪ್ರಶ್ನಿಸಿ ಜಯಾರ ಸೋದರ ಅಳಿಯ ಹೈಕೋರ್ಟ್ ಮೇಟ್ಟಿಲೇರಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್ ಕಿರುಬಾಕರನ್ ಹಾಗೂ ನ್ಯಾಯಮೂರ್ತಿ ಅಬ್ದುಲ್ ಖೂದ್ದಸ್ ಅವರ ಪೀಠ […]
ಐದನೇ ಹಂತದ ಲಾಕ್ ಡೌನ್ ಜಾರಿಯಾಗುತ್ತಾ ?

ದೇಶದಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮಕ್ಕಳು, ಹಿರಿಯರು, ವಯಸ್ಕರು ಹೀಗೆ ಯಾರನ್ನೂ ಬಿಡದೆ ತನ್ನ ಸುಳಿಗೆ ಸೆಳೆಯುತ್ತಿದೆ ಕೊರೋನಾ ಎಂಬ ಮಹಾ ವೈರಸ್. ಈ ವೈರಸನ್ನು ಕಟ್ಟಿಹಾಕಲು ಇಡೀ ದೇಶವನ್ನೇ ನಾಲ್ಕು ಸಲ ಲಾಕ್ ಡೌನ್ ಮಾಡಿದರೂ ವೈರಸ್ ನಿಂದ ತಪ್ಪಿಸಿಕೊಳ್ಳಲು ಹರಸಾಹಸ ಮಾಡುವಂತಾಗಿದೆ ದೇಶದ ಜನ. ಮೇ 31 ಕ್ಕೆ ನಾಲ್ಕನೇ ಲಾಕ್ ಡೌನ್ ಅಂತ್ಯವಾಗಬೇಕಿದೆ. ಲಾಕ್ ಡೌನ್ ಸಮಯದಲ್ಲಿ ಒಂದು ಹಂತಕ್ಕೆ ಇದ್ದ ಸೋಂಕಿತರ ಸಂಖ್ಯೆ, ಲಾಕ್ ಡೌನ್ ಸ್ವಲ್ಪ ಸಡಿಲಿಕೆಯಾದ […]
ವೈದ್ಯರಿಗೆ ಥ್ಯಾಂಕ್ಸ್ ಹೇಳಿದ ಸಾಲುಮರದ ತಿಮ್ಮಕ್ಕ

ಹಾಸನ. ಮೇ.23: ಮರಗಳನ್ನೇ ತನ್ನ ಉಸಿರಾಗಿಸಿಕೊಂಡಿರುವ, ಪರಿಸರ ಕಾಳಜಿ ಹೊಂದಿರುವ ಸಾಲುಮರದ ತಿಮ್ಮಕ್ಕನವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ವಾಂತಿ, ಭೇದಿ, ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿದ್ದ ತಿಮ್ಮಕ್ಕನವರನ್ನು ಗುರುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾಲುಮರದ ತಿಮ್ಮಕ್ಕನವರ ಆರೋಗ್ಯ ಚೇತರಿಸಿದ್ದು. ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ.
ದಲಿತ DCM ಮತಕ್ಷೇತ್ರದಲ್ಲಿ ದಲಿತರಿಗಿಲ್ಲ ರಕ್ಷಣೆ

ಬಾಗಲಕೋಟ ಜಿಲ್ಲೆ ಮುಧೋಳ ತಾಲೂಕಿನ ಕರಣಕುಮಾರ ಮೌರ್ಯ ಎನ್ನುವ ಯುವಕ ಮತ್ತು ಆತನ ಸ್ನೇಹಿತರು ನಿನ್ನೆ ದಿನ ಮುಧೋಳದಿಂದ ಇಂಗಳಗಿ ಮಾರ್ಗವಾಗಿ ವಜ್ರಮಟ್ಟಿ ಗ್ರಾಮಕ್ಕೆ ಕೆಲಸದ ನಿಮಿತ್ಯವಾಗಿ ಹೋಗುವಾಗ ಮಾರ್ಗ ಮಧ್ಯ ಇಂಗಳಗಿ ಗ್ರಾಮದ ಪಾನಮತ್ತರಾದ ಕೆಲ ಯುವಕರು ಕರಣಕುಮಾರ್ ಮತ್ತವರ ಸ್ನೇಹಿತರತ್ತ ವಿನಾಕಾರಣ ಕಲ್ಲು ತೂರಾಟ ಮಾಡಿದ್ದು, ಆಗ ಕಲ್ಲು ತಗುಲಿದ ಕರಣಕುಮಾರ್ ಎಂಬ ಹೆಸರಿನ ಯುವಕ ಆ ಪಾನ ಮತ್ತ ಗುಂಪಿನತ್ತ ತೆರಳಿ ತಮ್ಮತ್ತ ಕಲ್ಲು ಎಸೆಯುತ್ತಿರುವ ಕಾರಣ ಏನು ಎಂದು ಕೇಳಿದಾಗ ನಾವು […]
ಗದಗ: ಕೊವಿಡ್-19 ಸೋಂಕು ಗೆದ್ದ 59ರ ಮಹಿಳೆ: ಗದಗ ಜಿಲ್ಲಾಡಳಿತದ ಹೋರಾಟದ ಮಹತ್ವದ ಹೆಜ್ಜೆ.

ಗದಗ. ಮೇ. 1: ವಿಶ್ವವ್ಯಾಪಿ ಜಾಲ ಬೀಸಿರುವ ಕೊವಿಡ್-19 ಸೋಂಕು ಮಕ್ಕಳಿಗೆ ಮತ್ತು ವೃದ್ದರಿಗೆ ಮಾರಕವಾಗಿರುವಾಗ ಗದಗ ಜಿಲ್ಲೆಯ ಗದಗ ಬೆಟಗೇರಿ ನಗರದ ರಂಗನವಾಡಾದ 59ರ ವಯೋವೃದ್ಧೆ ಕೊವಿಡ್-19 ಸೋಂಕನ್ನು ಸೋಲಿಸಿ ಆಸ್ಪತ್ರೆಯಿಂದ ಮನೆಗೆ ಬಂದಿರುವುದು ಕೊವಿಡ್-19 ಸೋಂಕು ನಿಯಂತ್ರಣಕ್ಕೆ ಹಗಲಿರುಳು ಯುದ್ದೋಪಾದಿಯಲ್ಲಿ ತೊಡಗಿರುವ ಗದಗ ಜಿಲ್ಲಾಡಳಿತಕ್ಕೆ ಒಂದು ಮಹತ್ವದ ಹಾಗೂ ಆತ್ಮ ವಿಶ್ವಾಸ ಹೆಚ್ಚಿಸುವ ಹೆಜ್ಜೆಯಾಗಿದೆ. ರೋಗಿಯು ಸೋಂಕಿನಿಂದ ಹೊರಬರಲು ಶ್ರಮಿಸಿದ ಇನ್ನು 3 ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಯ ವಿಶ್ವಾಸ ಇದರಿಂದ […]
ಬಳ್ಳಾರಿ: ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾದ ಇಬ್ಬರ ಬಿಡುಗಡೆ, 6ಜನರ ಆರೋಗ್ಯವೂ ಸುಧಾರಣೆಯತ್ತ…

ಬಳ್ಳಾರಿ. ಮೇ 1: ಕೊರೋನಾ ಸೊಂಕಿತ ಜಿಲ್ಲೆಯ ಮತ್ತಿಬ್ಬರು ಇಂದು ಗುಣಮುಖರಾದ ಹಿನ್ನಲೆಯಲ್ಲಿ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಇಂದು ಬಿಡುಗಡೆ ಮಾಡಲಾಯಿತು. ಜಿಲ್ಲೆಯಲ್ಲಿ ಇದುವರೆಗೆ 13 ಜನ ಸೋಂಕಿತರಾಗಿದ್ದರು. ಅವರಲ್ಲಿ ಈ ಮೊದಲು ಗುಣಮುಖರಾದ ಪಿ-89,ಪಿ-91 ಮತ್ತು ಪಿ-141 ನಂತರ ಪಿ-90 & ಪಿ-151 ಅವರನ್ನು ಬಿಡುಗಡೆ ಮಾಡಲಾಗಿತ್ತು. ಮತ್ತೆ ಇನ್ನಿಬ್ಬರನ್ನು 21 ವರ್ಷ ವಯಸ್ಸಿನ ಪಿ-333 & 24 ವರ್ಷದ ಪಿ- 337 ಅವರನ್ನು ಗುಣಮುಖರಾದ ಹಿನ್ನೆಲೆ ಇಂದು ಬಿಡುಗಡೆ ಮಾಡಲಾಯಿತು. ಇವರಿಬ್ಬರೂ ಸಹ ಹೊಸಪೇಟೆ ನಗರಕ್ಕೆ […]
ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ

ಮುಂಬೈ ಎ.29: ಬಾಲಿವುಡ್ ನ ಜನಪ್ರಿಯ ನಟ ಇರ್ಫಾನ್ ಖಾನ್ ಅವರು ಅನಾರೋಗ್ಯ ಸಮಸ್ಯಯಿಂದ ಕಳೆದ ಸುಮಾರು ದಿನಗಳಿಂದ ಬಳಲುತ್ತಿದ್ದರು. ವಿಶ್ವಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅವರು ಬಹುಮುಖ ಪ್ರತಿಭೆಯುಳ್ಳ ಅದ್ಬುತ ನಟರಾಗಿದ್ದರು. ನಟ ಇರ್ಫಾನ್ ಖಾನ್ ಕಿರು ತೆರೆಯಲ್ಲಿ ಮೊದಲ ಬಾರಿಗೆ ಬಣ್ಣ ಹಚ್ಚಿ ‘ಸಲಾಮ್ ಬಾಂಬೆ’ ಚಿತ್ರದಲ್ಲಿ ನಟಿಸುವ ಮೂಲಕ ಸಿನಿ ಲೋಕಕ್ಕೆ ಕಾಲಿಟ್ಟರು. ವಿಭಿನ್ನವಾದ ಪಾತ್ರಗಳ ಮುಖೇನ ಸಿನಿ ಪ್ರೀಯರನ್ನು ರಂಜಿಸಿದರು. ತಮ್ಮ ಅದ್ಬುತ ನಟನೆಯ ಮೂಲಕ ಬಾಲಿವುಡ್ ಮಾತ್ರವಲ್ಲದೆ ಹಾಲಿವುಡ್ ಸಿನಿಮಾ […]
ಚಾಮರಾಜನಗರ: ಕೊರೊನಾ ವಾರಿಯರ್ಸ್ಗೆ ಪುಷ್ಪವೃಷ್ಠಿ ಮೂಲಕ ಕೃತಜ್ಞತಾ ಗೌರವ ಸಲ್ಲಿಕೆ

ಚಾಮರಾಜನಗರ, ಏ.27 : ಚಾಮರಾಜನಗರ ಕೊರೊನಾ ಮುಕ್ತ ಜಿಲ್ಲೆಯಾಗಿ ಮುಂದುವರೆಯುತ್ತಿರಲು ಹಗಲಿರುಳು ಪರಿಶ್ರಮ ಪಡುತ್ತಿರುವ ವಾರಿಯರ್ಸ್ ಎಂದೇ ಹೇಳಲಾಗುವ ಪ್ರಮುಖ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೆ ಪುಷ್ಪವೃಷ್ಠಿ ಗೈಯುವ ಮೂಲಕ ಗೌರವ, ಕೃತಜ್ಞತೆ ಸಮರ್ಪಿಸುವ ವಿಶಿಷ್ಟ ಕಾರ್ಯಕ್ರಮ ಚಾಮರಾಜನಗರದಲ್ಲಿ ಇಂದು ನಡೆಯಿತು. ಚಾಮರಾಜನಗರದ ಹೃದಯ ಭಾಗವೆಂದೇ ಕರೆಯಲ್ಪಡುವ ಜೈ ಭುವನೇಶ್ವರಿ (ಪಚ್ಚಪ್ಪ ವೃತ್ತ) ವೃತ್ತದಲ್ಲಿ ಜಿಲ್ಲಾಡಳಿತವು ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಕೋವಿಡ್-19 ಹರಡದಂತೆ ಶ್ರಮಿಸುತ್ತಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪೌರಕಾರ್ಮಿಕರು, ಪೊಲೀಸ್, ವೈದ್ಯರು, ಸೇರಿದಂತೆ ಅಗತ್ಯ ಸೇವೆಯ ಸಿಬ್ಬಂದಿಗೆ […]
ಮೇ 3ರವರೆಗೆ ಕಟಿಂಗ್ ಶಾಪ್, ರೆಸ್ಟೊರೆಂಟ್ ಬಂದ್: ಕೇಂದ್ರ ಸರಕಾರ ಸ್ಪಷ್ಟನೆ

ಹೊಸದಿಲ್ಲಿ ಎ.25: ಕೊರೋನಾ ವೈರಸ್ ನಿಂದಾಗಿ ಕೇಂದ್ರ ಸರಕಾರ ಘೋಷಣೆ ಮಾಡಿರುವ ಲಾಕ್ ಡೌನ್ ಮೇ 3ರಂದು ಕೊನೆಗೊಳ್ಳಲಿದೆ. ಕೇಂದ್ರ ಸರಕಾರ ದೇಶದ ಜನತೆಗೆ ಕೆಲವು ವಿನಾಯಿತಿ ನೀಡಿತ್ತು. ಆದರೆ ಇನ್ನೂ ಕೆಲವೊಂದು ಸಮಸ್ಯೆಯಲ್ಲಿ ಜನತೆ ಗೊಂದಲಕ್ಕಿಡಾಗಿದ್ದರು. ಈಗ ಕೇಂದ್ರ ಸರಕಾರ ರೆಸ್ಟೊರೆಂಟೆ, ಕಟಿಂಗ್ ಶಾಪ್, ಸಲೂನ್ ಗಳು ಮೇ 3ರವರೆಗೆ ಬಂದ್ ಆಗಿರುತ್ತದೆ ಎಂದು ಗೃಹ ಸಚಿವಾಲಯ ಟ್ವೀಟ್ ಮೂಲಕ ಸ್ಟಷ್ಟಪಡಿಸಿದೆ. #COVID19 UpdateIn view of queries coming from various sections of […]
ಸಾರ್ವಜನಿಕರಿಗೆ ಆತ್ಮವಿಶ್ವಾಸದ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬೈಕ್ ರ್ಯಾಲಿ ಮೂಲಕ ಜಾಗೃತಿ

ಹಾವೇರಿ: ಎ. 18 : ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ಲಾಕ್ಡೌನ್ ಪಾಲನೆ, ಕರೋನಾ ಸೋಂಕು ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಅಗತ್ಯ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಆತ್ಮವಿಶ್ವಾಸ ತುಂಬುವ ಸಂದೇಶವನ್ನು ಸಾರ್ವಜನಿಕರಿಗೆ ಸಾರಲು ಪೊಲೀಸ್ ಇಲಾಖೆ ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್ ಹಾಗೂ ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು. ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಹೊಸಮನಿ ಸಿದ್ದಪ್ಪ ವೃತ್ತದಿಂದ […]