ಕೊರೋನಾ ಲಾಕ್ ಡೌನ್ ಬೇಜಾರಾದರೆ ಅಂಗೈಯಲ್ಲಿ ಇ-ಗ್ರಂಥಾಲಯ

ದೇಶದಲ್ಲಿ ಲಾಕ್ ಡೌನ್ ಪರಿಸ್ಥಿತಿ ಕಾರಣ ಸಾರ್ವಜನಿಕ ಗ್ರಂಥಾಲಯಗಳಿಲ್ಲದೆ ಬೇಜಾರಾಗಿರುವ ಓದುಗರಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಇ-ಗ್ರಂಥಾಲಯ ವೆಬ್‍ಸೈಟ್ ಪರಿಚಯಿಸಿದೆ. ಲಾಕ್ ಡೌನ್‍ನಿಂದ ಹೋಂ ಕ್ವಾರಂಟೈನ್, ಐಸೋಲೆಷನ್‍ನಲ್ಲಿರುವ ಮತ್ತು ಮನೆಯಲ್ಲಿ ಶ್ರೀಸಾಮಾನ್ಯ ಓದುಗರಿಗೆ ಅನುಕೂಲವಾಗಲು ಹಾಗೂ ಓದುವ ಹವ್ಯಾಸ ಬೆಳೆಸಿಕೊಳ್ಳುವವರಿಗಾಗಿ ಆಂಗೈಯಲ್ಲೆ ಇ-ಗ್ರಂಥಾಲಯ ಎನ್ನುವ ವೆಬ್‍ಸೈಟ್ ಆ್ಯಪ್ ತಂತ್ರಾಂಶ ಅಭಿವೃದ್ಧಿ ಪಡಿಸಿದೆ. ಇ-ಪುಸ್ತಕ ಓದಲು ಸಾರ್ವಜನಿಕರು ಟ್ಯಾಬ್, ಕಂಪ್ಯೂಟರ್, ಲ್ಯಾಪ್‍ಟಾಪ್ ನಲ್ಲಿ www.Karnatakadigitalpubliclibrary.org ಗೆ ಭೇಟಿ ನೀಡಬಹುದು ಅಥವಾ ಮೊಬೈಲ್‍ನಲ್ಲಿ ಗೂಗಲ್ ಪ್ಲೇ ಸ್ಟೋರ್ ಹೋಗಿ ಇ-ಸಾರ್ವಜನಿಕ […]

ಅನಾವಶ್ಯಕವಾಗಿ ಓಡಾಡುವ ವಾಹನ ಸವಾರರೆ ಎಚ್ಚರ !

ವಿಜಯಪುರ ಎ.07: ಲಾಕ್‍ಡೌನ್ ಪರಿಣಾಮಕಾರಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ, ಕೋರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಅನಾವಶ್ಯಕವಾಗಿ ಓಡಾಡುವ ದ್ವಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶ ನೀಡಿದ್ದಾರೆ. ಈ ಆದೇಶವನ್ನು ಉಲ್ಲಂಘಿಸುವವರ ವಾಹನವನ್ನು ವಶಪಡಿಸಿಕೊಂಡು (ಸೀಜ್) ತಡೆಹಿಡಿಯುವ ಅಧಿಕಾರವನ್ನು ಲಾಕ್‍ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಆಯಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರುಗಳಿಗೆ ಅಧಿಕಾರಿವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದ್ದು, ಈ […]

ಎಪ್ರೀಲ್ 9ರಂದು ಮುಸ್ಲಿಂ ಪ್ರಾರ್ಥನಾ ಸ್ಥಳಗಳಿಗೆ ನಿರ್ಬಂಧ

ವಿಜಯಪುರ ಎ.06: ಸರ್ಕಾರದ ನಿರ್ದೇಶನದನ್ವಯ ಕೋವಿಡ್-19 ಮುನ್ನೆಚ್ಚರಿಕೆಯಾಗಿ ಇದೇ ಎಪ್ರೀಲ್ 9ರಂದು ಮುಸ್ಲಿಂರಿಗೆ ಅತ್ಯಂತ ಮಹತ್ವದ ದಿನವಾಗಿರುವ ಶಬ್-ಎ-ಬರಾತ್‍ದಂದು ಯಾರೂ ಒಟ್ಟುಗೂಡಿ ಧಾರ್ಮಿಕ ಪ್ರಾರ್ಥನೆ ಅಂಗವಾಗಿ ಮಸೀದಿ, ಮುಸ್ಲಿಂ ಖಬ್ರಸ್ಥಾನ ಹಾಗೂ ದರ್ಗಾಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಆಕ್ವಾಫ್ (AUQAF) ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಇಸ್ಲಾಹುದ್ದೀನ್ ಗದ್ಯಾಳ ಅವರು ಆದೇಶ ಹೊರಡಿಸಿದ್ದಾರೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ. ಕೋವಿಡ್-19 ಅಪಾಯದ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಮುಸ್ಲಿಂ ಖಬ್ರಸ್ಥಾನಗಳಲ್ಲಿ ಮತ್ತು ಖಬ್ರಸ್ಥಾನದ […]