Vijayapura News : ಸೆಪ್ಟೆಂಬರ್ 15 ರವರೆಗೆ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ

ವಿಜಯಪುರ: ಸೈಬರ್ ವಂಚನೆ ಸೇರಿದಂತೆ ಹಲವು ಆನ್ಲೈನ್ ಬೆಳವಣಿಗೆಗಳ ಬಗ್ಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ಸೆಪ್ಟೆಂಬರ್ 15 ರವರೆಗೆ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನವನ್ನು ಆರಂಭಿಸಿದ್ದು, ಜಿಲ್ಲೆಯಲ್ಲಿ ಈ ಅಭಿಯಾನದಿಂದ ಯುವಕರನ್ನು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯುತ್ತಿವೆ ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ಜಾವೀದ್ ತಿಳಿಸಿದರು. Cyber fraud ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಕೂಡ ತನ್ನ ಜಾಗೃತಿ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸೈಬರ್ […]
Vijayapura News : ಒಳ ಮೀಸಲಾತಿ ಜಾರಿ; ರಕ್ತದಲ್ಲಿ ಪತ್ರ ಬರೆದ ಯುವಕ

ವಿಜಯಪುರ: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಯುವಕನೋರ್ವ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದಿದ್ದಾನೆ. ವಿಜಯಪುರ ತಾಲ್ಲೂಕಿನ ಐನಾಪುರ ಗ್ರಾಮದ ಯುವಕ ದೇವೇಂದ್ರ ಹಡಲಗಿ ಪತ್ರ ಬರೆದಿದ್ದಾನೆ. ಇನ್ನು ಮುಖ್ಯಮಂತ್ರಿಯವರೇ ಕಳೆದ 40 ವರ್ಷದ ನಮ್ಮ ಸಮುದಾಯದ ಒಳಮೀಸಲಾತಿ ಹೋರಾಟದ ಬೇಡಿಕೆಯನ್ನು ಶೀಘ್ರವೇ ತಾವು ಇತಿಹಾಸ ನಿರ್ಮಿಸುತ್ತೀರಿ ಎಂಬ ನಂಬಿಕೆಯಿಂದ ನನ್ನ ರಕ್ತದ ಮೂಲಕ ಮನವಿ ಮಾಡುತ್ತೇನೆ ಎಂದು ಪತ್ರ ಬರೆದಿದ್ದಾನೆ. ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಮಹಾನ್ ರಕ್ತದ ಮನವಿ.. ಒಳ ಮೀಸಲಾತಿ ಜಾರಿ ಮಾಡಿ (Reservation) […]
Vijayapura News : ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ ವೃತ್ತಿ ಶಿಕ್ಷಕರ ವೃತ್ತಿ; ಅಶೋಕ್ ಹಂಚಲಿ

ವಿಜಯಪುರ: ಬಸವೇಶ್ವರ ವಿದ್ಯಾವರ್ಧಕ ಸಂಘದ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಅಡಿಯಲ್ಲಿ 14 ವರ್ಷದ ವಿದ್ಯಾರ್ಥಿಗಳ ಬೃಹತ್ ಸಮ್ಮಿಲನ (Senior Students’ Association)ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿದ ಡಾ.ಡಿ.ಕೆ ಕಾಂಬಳೆ ಉಪಕುಲ ಸಚಿವರು ಆಡಳಿತ ವಿಭಾಗ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯ ಬೆಳಗಾವಿ ಇವರು ಹಿರಿಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಿಕ್ಷಕ ವೃತ್ತಿ ಎಲ್ಲಾ ವೃತ್ತಿಗಳಿಗಿಂತ ಶ್ರೇಷ್ಠವಾದ ವೃತ್ತಿ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಯುತ ಅಶೋಕ್ ಹಂಚಲಿ ಪ್ರಾಚೀನ ಕಾಲದಿಂದ ಪ್ರಸ್ತುತ ಕಾಲದವರೆಗೂ ಪಾವಿತ್ರತೆ ಉಳಿಸಿಕೊಂಡ […]
Vijayapura News : ಅಕ್ರಮ ಅಕ್ಕಿ ಸಾಗಾಟ ಇಬ್ಬರ ಬಂಧನ

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ತಿಳಗುಳ ಗ್ರಾಮದಲ್ಲಿ ಹಾಗೂ ಇಂಡಿ ಪಟ್ಟಣದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಾಗಿಸುತ್ತಿರುವ ಅಕ್ಕಿಯನ್ನು (Illegal rice transportation) ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ದೇವರಹಿಪ್ಪರಗಿ ತಾಲೂಕಿನ ತಿಳಗುಳ ಗ್ರಾಮದಲ್ಲಿ ಟಾಟಾ ಎಸಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲಿಸ್ ಅಧಿಕಾರಿಗಳು ದಾಳಿ ನಡೆಸಿದ 7 ಪ್ಲಾಸ್ಟಿಕ್ ಚೀಲ್ಗಳಲ್ಲಿ ತುಂಬಿರುವ ಅಕ್ಕಿ ಹಾಗೂ […]
Vijayapura News : ವಿಶ್ವದ ಆರ್ಥಿಕ ಸಾಮರ್ಥ್ಯ ಹೆಚ್ಚಿಸಿದವರು ಕಾರ್ಮಿಕರು : ವಿಶ್ರಾಂತ ಪ್ರಾಚಾರ್ಯ ಬಿ ಎಮ್ ಆಜೂರ

ವಿಜಯಪುರ: ವಿಶ್ವದ ಕಾರ್ಮಿಕರು ಮಳೆ ಬಿಸಿಲು ಚಳಿಯನ್ನದೆ ಹಗಲಿರಳು ದುಡಿಯುತ್ತಿರುವದರಿಂದ ವಿಶ್ವದ ಆರ್ಥಿಕ ಸಾಮರ್ಥ್ಯ ಹೆಚ್ಚಿಸಿದ್ದಾರೆ. ವಿಶ್ವದ ಜನಸಂಖ್ಯೆ ಅಪಾರವಾಗಿ ಬೆಳೆಯುತ್ತಿದ್ದರು ಕೌಶಲ್ಯಯುತ ಕಾರ್ಮಿಕರ ಕೊರತೆ ವಿಶ್ವಕ್ಕೆ ಕಾಡುತ್ತಿದೆ. ಎಂದು ವಿಶ್ರಾಂತ ಪ್ರಾಚಾರ್ಯ ಬಿ ಎಮ್ ಆಜೂರ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ, ತಾಲೂಕ ಹಾಗೂ ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಜರುಗಿದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕುರಿತು ಚಿಂತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕಾರ್ಮಿಕರ ಹಕ್ಕು ಮತ್ತು ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ […]
Vijayapura News : ಮೇ.09ಕ್ಕೆ ಜಿಲ್ಲೆಯಲ್ಲಿ ಉದ್ಯೋಗ ಮೇಳ

ವಿಜಯಪುರ: ಜಿಲ್ಲಾ ಉದ್ಯೋಗ udyoga mela ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನವಬಾಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ನವಬಾಗದಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮೇ.09ರ ಬೆಳಿಗ್ಗೆ 10ಗಂಟೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ 20ಕ್ಕೂ ಹೆಚ್ಚು ಸ್ಥಳೀಯ ಹಾಗೂ ವಿವಿಧ ಎಂ.ಎನ್.ಸಿ ಕಂಪನಿಗಳು ಭಾಗವಹಿಸಲಿವೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐಟಿಐ, ಡಿ.ಇಡಿ, ಬಿ.ಇಡಿ ಹಾಗೂ ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರುವ 35 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲಾತಿ ಸಹಿತ […]
Vijayapura News : ಸಂಯಮ ಕಳೆದುಕೊಂಡ ಮುಖ್ಯಮಂತ್ರಿ ; ಶರಣು ಸಬರದ

ವಿಜಯಪುರ : Chief Minister / Police ಧಾರವಾಡದ ಹೆಚ್ಚುವರಿ ಪೋಲೀಸು ವರಿಷ್ಠಾಧಿಕಾರಿಗಳಾದ ನಾರಾಯಣ ಭರಮನಿಯರ ಅವರ ಜೊತ ಅಸಭ್ಯ ವರ್ತನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡುವಂತೆ ಆಗ್ರಹಿಸಿ ಗೌರವಾನ್ವಿತ ರಾಜ್ಯಪಾಲರಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಜಿಲ್ಲಾ ಯುವ ಪರಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಯುವ ಪರಿಷತ್, ಅಧ್ಯಕ್ಷರಾದ ಶರಣು ಸಬರದ ಅವರು ಮಾತನಾಡಿ, ಅತ್ಯಂತ ಗೌರವಾನ್ವಿತ ಪೋಲೀಸ ನೌಕರಿ ಮಾಡುತ್ತಿರುವ ಹಿರಿಯ ಪೋಲೀಸ ಅಧಿಕಾರಿ, ಧಾರವಾಡದ ಹೆಚ್ಚುವರಿ ಪೋಲೀಸ […]
Vijayapura News : ಹಿರಿಯ ಕಲಾವಿದರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಪ್ರೋ. ಶರಣಗೌಡ ಪಾಟೀಲ ಅಭಿಮತ

ವಿಜಯಪುರ: ರಂಗಭೂಮಿಗೆ ವಿಜಯಪುರ ಜಿಲ್ಲೆಯ ಕೊಡುಗೆ ಅಪಾರ. ಹಂದಿಗನೂರು ಸಿದ್ರಾಮಪ್ಪ, ಶ್ರೀರಂಗರನ್ನು ಹಿಡಿದು ಇಂದಿನ ಎಸ್. ಎಂ. ಖೇಡಗಿ, ಎಲ್.ಬಿ ಶೇಖ ಮಾಸ್ತರರವರೆಗೆ ವೃತ್ತಿ ರಂಗಭೂಮಿ ಬೆಳೆದು ಬಂದದ್ದು ಒಂದು ಇತಿಹಾಸ. Ranga Vaibhav Havyasi Natak ಇದಕ್ಕೆ ಪೂರಕವಾಗಿ ಹವ್ಯಾಸಿ ರಂಗಭೂಮಿಯೂ ತನ್ನದೇಯಾದ ಕೊಡುಗೆ ನೀಡಿದೆ. ಅಂತಹ ಹಿರಿಯ ಕಲಾವಿದರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶರಣಗೌಡ ಪಾಟೀಲ ಅಭಿಪ್ರಾಯಪಟ್ಟರು. ನಗರದ ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ರಂಗವೈಭವ ಹವ್ಯಾಸಿ […]
Vijayapura News : ರಿಕ್ಕಿ ರೈ ಮೇಲೆ ದಾಳಿ ಜಯ ಕರ್ನಾಟಕ ಸಂಘಟನೆ ಖಂಡನೆ

ವಿಜಯಪುರ : ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ದಿ|| ಮುತ್ತಪ್ಪ ರೈ ಅವರ ಮಗನಾದ ರಿಕ್ಕಿ ರೈ Ricky Rai ಇವರು ಮೇಲೆ ನಡೆದಿರುವ ದಾಳಿಯ ಕುರಿತು ಸೂಕ್ತ ತನಿಖೆ ಹಾಗೂ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಹಾಗೂ ರಿಕ್ಕಿ ರೈ ಕುಟುಂಬಕ್ಕೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಜಯ ಕರ್ನಾಟಕ ಸಂಘಟನೆ, ವಿಜಯಪುರ ಘಟಕದ ವತಿಯಿಂದ ರಾಜ್ಯದ ಗೃಹ ಸಚಿವರಾದ ಜಿ. ಪರಮೇಶ್ವರ್ ಅವರಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಯಿತು. ಈ ಸಮಯದಲ್ಲಿ […]
Vijayapura News : ದೇಶದ ನಾಗರಿಕರಿಗೆ ಸಮಾನತೆ ಪ್ರತಿಪಾದಿಸಿದ ಡಾ. ಬಿ.ಆರ್. ಅಂಬೇಡ್ಕರ

ವಿಜಯಪುರ: Vijayapura news ಕಾನೂನು ಎಲ್ಲರಿಗೂ ಸಮಾನವಾದದ್ದು, ಸಂವಿಧಾನ ರಚನೆ ಎಲ್ಲರ ಜವಾಬ್ದಾರಿ ದೇಶದ ಸಾರ್ವಭೌಮತ್ವವನ್ನು ಕಾಪಾಡುವುದು ನಮ್ಮ ಕರ್ತವ್ಯ. ಮೂಲಭೂತ ಹಕ್ಕುಗಳ ಮತ್ತು ಕರ್ತವ್ಯಗಳನ್ನು ಪಾಲಿಸುವುದರಿಂದ ದೇಶದಲ್ಲಿ ಶಾಂತಿ ನೆಲಸಲಿದೆ ಎಂದು ಉಪನ್ಯಾಸಕಿ ವಿದ್ಯಾ ಕಲ್ಯಾಣಶೆಟ್ಟಿ ಹೇಳಿದರು. ನಗರದ ಅಖಿಲ ಭಾರತ ವೀರಶೈವ ಲಿಂಗಾಯತ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಭೆಯ ಜಿಲ್ಲಾ ಘಟಕದವರ ವತಿಯಿಂದ ಹಮ್ಮಿಕೊಂಡಿದ್ದ ಶಿವಾನುಭವಗೋಷ್ಠಿಯಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರರ ಬದುಕು ಮತ್ತು ಸಾಧನೆ ಕುರಿತು ಉಪನ್ಯಾಸ ನೀಡಿ ಮಾತನಾಡಿದ ಅವರು […]