ಭೀಮರಾವ ಕುಲಕರ್ಣಿ ಅವರು ಫ.ಗು ಹಳಕಟ್ಟಿಯವರ ಅತ್ಯಂತ ನಿಕಟವರ್ತಿಗಳಾಗಿದ್ದರು – ಡಾ. ವ್ಹಿ ಡಿ ಐಹೊಳ್ಳಿ

ವಿಜಯಪುರ : ಫ.ಗು ಹಳಕಟ್ಟಿಯವರ ಮುದ್ರಣಾಲಯದಲ್ಲಿ ಮುದ್ರಣಯಂತ್ರದ ಮೊಳೆ ಜೋಡುವ ಕೆಲಸ ಮಾಡುತ್ತಿದ್ದ ಭೀಮರಾವ ಕುಲಕರ್ಣಿಯವರು ಹಳಕಟ್ಟಿಯವರ ಒಡನಾಟದಿಂದ ಹದಿನೇಳು ಲೇಖನವನ್ನು ಬರೆದರು ಎಂದು ವ್ಹಿ ಡಿ ಐಹೊಳ್ಳಿ ಹೇಳಿದರು. ನಗರದ ಪಿಡಿಜೆ ಹೈಸ್ಕೂಲ್ ಸಭಾಭವನದಲ್ಲಿ ದಿ. ಶ್ರೀ ಭೀಮರಾವ ಶ್ರೀ. ಕುಲಕರ್ಣಿ ಸ್ಮರಣಾರ್ಥ , ‘ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ವಿಜಯಪುರ ಜಿಲ್ಲಾ ಸಮಿತಿ’ ಆಯೋಜನೆಯ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿಯವರ ಜೀವನ ದರ್ಶನದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು ಭೀಮರಾವ ಕುಲಕರ್ಣಿ […]
“ಲಾಬಿ ಮಾಡುವ ಪ್ರಶ್ನೆಯೇ ಇಲ್ಲ; ಅರ್ಹತೆ ಆಧಾರವಾಗಿ ಅವಕಾಶ ನೀಡಲಿ”ವಿಠಲ ಕಟಕದೊಂಡ

ವಿಜಯಪುರ: ರಾಜ್ಯದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳ ನಡುವೆ, ಶಾಸಕ ವಿಠಲ ಕಟಕದೊಂಡ ಅವರು ತಮ್ಮನ್ನು ಸಚಿವ ಸ್ಥಾನಕ್ಕೆ ಆಕಾಂಕ್ಷಿ ಎಂದು ಹೇಳಿಕೊಂಡಿದ್ದು, ಆದರೆ ದಿಲ್ಲಿಗೆ ತೆರಳಿ ಲಾಬಿ ಮಾಡುವ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ನಾನು ಆಕಾಂಕ್ಷಿ ಹೌದು. ಆದರೆ ದಿಲ್ಲಿಗೆ ಹೋಗಿ ಲಾಬಿ ಮಾಡುವುದಿಲ್ಲ. ಲಾಬಿ ಮಾಡಿದವರಿಗೆ ಮಾತ್ರ ಅವಕಾಶ ಸಿಗುತ್ತದೆ ಎಂಬ ಯಾವುದೇ ನಿಯಮವಿಲ್ಲ. ನಾಯಕರು ಮನಸ್ಸು ಮಾಡಿದರೆ ತಮ್ಮಿಂದಲೇ ಅವಕಾಶ ನೀಡುತ್ತಾರೆ” ಎಂದು ಹೇಳಿದರು. ಮೈಕ್ರೋ […]
“ಆರೋಪ ಸಾಬೀತುಪಡಿಸಿ”: ಯತ್ನಾಳ ವಿರುದ್ಧ ವಿಜುಗೌಡ ಪಾಟೀಲ ಕಿಡಿ

ವಿಜಯಪುರ: ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ವಿಜುಗೌಡ ಪಾಟೀಲ vijugouda patil ಪತ್ರಿಕಾಗೋಷ್ಠಿಯಲ್ಲಿ ತೀವ್ರ ಪ್ರತಿಕ್ರಿಯೆ ನೀಡಿದ್ದು, ತಮ್ಮ ವಿರುದ್ಧ ಮಾಡಲಾಗುತ್ತಿರುವ ಆರೋಪಗಳನ್ನು ದೃಢಪಡಿಸುವಂತೆ ಸವಾಲು ಹಾಕಿದರು.“ಯಾರೇ ಆರೋಪ ಮಾಡಲಿ, ಅದನ್ನು ದಾಖಲೆಗಳೊಂದಿಗೆ ಸಾಬೀತುಪಡಿಸಬೇಕು. ಇಲ್ಲದಿದ್ದರೆ ಇಂತಹ ಹೇಳಿಕೆಗಳಿಗೆ ಮಹತ್ವ ಕೊಡಬಾರದು,” ಎಂದು ಅವರು ಹೇಳಿದರು. ತಮ್ಮ ಬಳಿ ಸಹ ಅಗತ್ಯ ದಾಖಲೆಗಳಿದ್ದು, ಸಾರ್ವಜನಿಕ ವೇದಿಕೆಯಲ್ಲಿ ‘ಪ್ರೂಫ್’ಗಳೊಂದಿಗೆ ತೋರಿಸಲು ಸಿದ್ಧವಿರುವುದಾಗಿ ಸ್ಪಷ್ಟಪಡಿಸಿದರು.ತಮ್ಮ ರಾಜಕೀಯ ಹಿನ್ನೆಲೆಯನ್ನು ಉಲ್ಲೇಖಿಸಿದ ಅವರು, “ನಾನು ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಬಾರಿ ಸ್ಪರ್ಧಿಸಿದ್ದೇನೆ. […]
ಹೋರಾಟಗಾರನಾದವನು ಒಳ್ಳೆ ಪತ್ರಕರ್ತನಾಗಲು ಸಾಧ್ಯ- ಬಿ ಎಂ ಹನೀಫ್

ಒಬ್ಬ ಹೋರಾಟಗಾರನಾದವನು ಒಳ್ಳೆಯ ಪತ್ರಕರ್ತನಾಗಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಬಿ ಎಂ ಹನೀಫ್ ಹೇಳಿದರು.ಅವರು ವಿಜಯಪುರ ನಗರದ ದರಾಬಾರ್ ಪ್ರೌಢ ಶಾಲೆ ಮೈದಾನದಲ್ಲಿ ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ 5ದಿನಗಳ ಕಾಲ ಹಮ್ಮಿಕೊಂಡಿರುವ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದಲ್ಲಿ ಮೊದಲ ದಿನದ ಮೊದಲ ಗೋಷ್ಠಿ ಸಾಮಾಜಿಕ ಬದ್ಧತೆ ಪತ್ರಕರ್ತನಾಗಿ ನನ್ನ ಅನುಭವಗಳು ವಿಷಯದ ಮಂಡನೆ ಮಾಡಿ ಮಾತನಾಡಿದರು.ಇತ್ತೀಚಿಗೆ […]
ಐತಿಹಾಸಿಕ ಅವಶೇಷ ಪತ್ತೆ

ಕರಿಜನ ವರದಿ ವಿಜಯಪುರ : ವಿಜಯಪುರದ ಗೌಡಗೆರೆ ಹಳ್ಳಿಯ ಮೂಡಣಕೇರಿಯಲ್ಲಿ ಕಲ್ಯಾಣ ಚಾಲುಕ್ಯರ ನಾಲ್ಕನೇ ಸೋಮೇಶ್ವರನ ಕಾಲದಲ್ಲಿ ನಿರ್ಮಾಣವಾದ ಶಿವತೀರ್ಥ ಶ್ರೀ ಸ್ವಯಂಭು ವಿನಾಯಕ ದೇವಸ್ಥಾನದ ಮಕರ ತೋರಣದಲ್ಲಿ ಹನುಮದೇವರ ಅಪರೂಪದ ಉಬ್ಬು ಶಿಲ್ಪ ಇದ್ದು ರಾಷ್ಟ್ರೀಯ ಸಂಶೋಧನಾ ವೇದಿಕೆಯಿಂದ ಹಮ್ಮಿಕೊಂಡಿದ್ದ ಕ್ಷೇತ್ರ ಕಾರ್ಯದಲ್ಲಿ ಉಬ್ಬು ಶಿಲ್ಪವನ್ನು ಸಂಶೋಧಿಸಲಾಗಿದೆ.ಇದೇ ಮೊದಲ ಬಾರಿಗೆ ಇಂತಹ ಅಪರೂಪದ ಶಿಲ್ಪ ಪತ್ತೆಯಾಗಿದ್ದು,ಇದನ್ನು ಇತಿಹಾಸ ಸಂಶೋಧಕ ಹಾಗೂ ರಾಷ್ಟ್ರೀಯ ಸಂಶೋಧನಾ ವೇದಿಕೆಯ ಅಧ್ಯಕ್ಷ ಲಾಯಪ್ಪ ಇಂಗಳೆ ಅವರು ಗುರುತಿಸಿದ್ದಾರೆ.ಕಲ್ಯಾಣ ಚಾಲುಕ್ಯರ ಕಾಲದಲ್ಲಿ ದೇವಗಿರಿ […]
ಅನುಭವ ಮಂಟಪ ಶರಣ ಚಳವಳಿಯ ಹೃದಯ

ಕರಿಜನ ವರದಿವಿಜಯಪುರ : ಅನುಭವ ಮಂಟಪವು ಶರಣ ಚಳವಳಿಯ ಹೃದಯವಾಗಿತ್ತು. ಇಲ್ಲಿ ಮಹಿಳೆಯರು ಮೌನ ಶ್ರೋತೃಗಳಾಗಿರಲಿಲ್ಲ. ಅವರು ತರ್ಕಕಾರ್ತಿಯರು ಮತ್ತು ವಚನ ರಚನಾಕಾರರೂ ಆಗಿದ್ದರು ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿದ್ದ ಅಕ್ಕಮಹಾದೇವಿ ಜಯಂತೋತ್ಸವ ಪ್ರಯುಕ್ತ ನಡೆದ `ಅಕ್ಕಮಹಾದೇವಿಯ ಚಿಂತನೆಗಳು’ ಎಂಬ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಅಕ್ಕಮಹಾದೇವಿ ಅನುಭವ ಮಂಟಪದಲ್ಲಿ ಪುರುಷ ಶರಣರ ಮುಂದೆ ಧೈರ್ಯವಾಗಿ ಮಾತನಾಡಿದರು. ಹೀಗಾಗಿ ಅಕ್ಕಮಹಾದೇವಿ ಸ್ತ್ರೀ ಸ್ವಾತಂತ್ರ್ಯ ಮತ್ತು ಸಮಾನತೆಯ ಸಂಕೇತವಾಗಿದ್ದಾರೆ […]
ಸಮಾಜದ ಉನ್ನತಿಯಲ್ಲಿ ಸ್ತ್ರೀಯ ಪಾತ್ರ ಅನನ್ಯ

ಕರಿಜನ ವರದಿವಿಜಯಪುರ : ಮಹಿಳೆಯ ಸ್ಥಾನ ಅತ್ಯಂತ ಹಿರಿದಾಗಿದ್ದು, ಕುಟುಂಬದ ಅಷ್ಟೇ ಅಲ್ಲ ಸಮಾಜದ ಉನ್ನತಿಗೆ ಆಕೆಯ ಕೊಡುಗೆ ಅಪಾರ ಎಂದು ಖ್ಯಾತ ಪ್ರಸೂತಿ ತಜ್ಞೆ ಡಾ.ಜಯಶ್ರೀ ಮಂಗಲಗಿ ಹೇಳಿದರು.ವಿಜಯಪುರದ ಹಳಕೇರಿ ಗಲ್ಲಿಯಲ್ಲಿರುವ ಗಾಯಿ ಬಡಾವಣೆಯ ಬಕುಲ ಧಾಮದಲ್ಲಿ ಸಿರಿಗನ್ನಡ ವೇದಿಕೆ ಮಹಿಳಾ ಘಟಕದ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಶ್ರೇಯೋಭಿವೃದ್ಧಿ ಸಮಾಲೋಚನಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಹಿಳೆ ತ್ಯಾಗದ ಪ್ರತೀಕ, ಕರುಣೆಯ ಗಣಿ, ವಾತ್ಸಲ್ಯದ ಪ್ರತಿಬಿಂಬ, ಮಹಿಳೆ ಸಹನೆಯ ಮೂರ್ತಿ, ಆದರೆ ಅದು […]
ಜೋರಾಪುರ ಪೇಠದಲ್ಲಿ ಶಿವಶರಣ ಹಳಯ್ಯನವರ ಜಯಂತಿ

ವಿಜಯಪುರ – ನಗರದ ಜೋರಾಪುರ ಪೇಠದಲ್ಲಿ ಶ್ರೀ ಶಿವಶರಣ ಹಳಯ್ಯನವರ ಜಯಂತ್ರಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಂ.ಆರ್. ಕಬಾಡೆಯವರು 12ನೇ ಶತಮಾನದ ಮಹಾನ ಶರಣರಾದ ಹರಳಯ್ಯನವರ ಜೀವನ ಮತ್ತು ಸಾಧನೆ ಕುರಿತು ವಿವರವಾಗಿ ಮಾತನಾಡಿದರು. ಇನ್ನೋರ್ವ ಅತಿಥಿ ಶಾಂತಮಲ್ಲಪ್ಪ ಕಟ್ಟಿಮನಿಯವರು ಸಮಾಜದಲ್ಲಿ ಶರಣ ಹರಳಯ್ಯ ಸಮಾಜ ಬಂಧುಗಳು ಒಗ್ಗಟ್ಟಾಗಿ ಇಂತ ಮಹಾ ಕಾಯಕ ಶರಣರ ಜಯಂತ್ಯೋತ್ಸವದಲ್ಲಿ ಭಾಗಿಯಾಗಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು. ಅಂದಾಗ ಮಾತ್ರ ನಮ್ಮ ಜೀವನ ಸಾರ್ಥಕವಾಗುವುದು. ಇನ್ನೊರ್ವ ಅತಿಥಿಗಳಾದ ಗಣೇಶ […]
ದೇಶದ ಗಡಿಯಲ್ಲಿ ನಿಂತು ನಮ್ಮನ್ನು ರಕ್ಷಿಸುತ್ತಿರುವ ಸೈನಿಕರು ನಿಜವಾದ ಹೀರೋಗಳು

ವಿಜಯಪುರ: ಸಿನಿಮಾಗಳಲ್ಲಿ ನಟಿಸುವ ನಟ – ನಟಿಯರು ಹೀರೋಗಳಲ್ಲ ಅವರು ಕೇವಲ ನಟರು ಮಾತ್ರ ನಿಜವಾದ ಹೀರೋಗಳೆಂದರೆ ನಮ್ಮ ದೇಶಕ್ಕಾಗಿ ಪ್ರಾಣ ಅರ್ಪಣೆ ಮಾಡಿದ ಹೋರಾಟಗಾರರು ಹಾಗೂ ದೇಶದ ಗಡಿಯಲ್ಲಿ ನಿಂತು ನಮ್ಮನ್ನು ರಕ್ಷಿಸುತ್ತಿರುವ ಸೈನಿಕರು ನಿಜವಾದ ಹೀರೋಗಳು ಎಂದು ವಾಗ್ಮಿಗಳಾದ ಬಸವರಾಜ ಹಂಚಲಿ ಮಾತನಾಡಿದರು. ನಗರದ ಹುತಾತ್ಮ ವೃತ್ತದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಭಗತ್ ಸಿಂಗ್ ರಾಜಗುರು ಸುಖದೇವ ಅವರ ಬಲಿದಾನ ದಿವಸದ ಅಂಗವಾಗಿ ಹಮ್ಮಿಕೊಂಡಿದ್ದ ಉಘೇ ವೀರಭೂಮಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕರಾಗಿ ಮಾತನಾಡಿದ […]
ಗುರುದೇವಿ ಹಳ್ಳೂರಗೆ ಪಿ.ಎಚ್.ಡಿ. ಪ್ರದಾನ

ವಿಜಯಪುರ: ಶ್ರೀ ಬಸವೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ಗುರುದೇವಿ ಹಳ್ಳೂರಗೆ (ನಂದಿನಿ ಮ. ಬಿರಾದಾರ) ಶಿಕ್ಷಣ ಶಾಸ್ತ್ರ ವಿಭಾಗದಲ್ಲಿ ಮಂಡಿಸಿದ “ಎ ಸ್ಟಡಿ ಆಫ್ ಲರ್ನಿಂಗ್ ಟೀಚಿಂಗ್ ಅಂಡ್ ಥಿಂಕಿಂಗ್ ಸ್ಟೈಲ ಆಫ್ ಪ್ರಾಸ್ಪೆಕ್ಟಿವ್ ಟೀಚರ್ಸ್ ಇನ್ನ ರಿಲೇಶನ್ ಟು ದೇಆರ್ ಟೀಚಿಂಗ್ ಕಾಂಪಿಟನ್ಸ” ಎಂಬ ಪ್ರಬಂಧಕ್ಕೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪಿ ಎಚ್ ಡಿ ಪದವಿ ಪ್ರದಾನ ಮಾಡಿದೆ. ಇವರಿಗೆ ಮೌಲ್ಯಮಾಪನ ಕುಲ ಸಚಿವ ಹಾಗೂ ಶಿಕ್ಷಣ ಶಾಸ್ತ್ರ […]