Bgalkote News | ಎಸ್‍ಸಿ, ಎಸ್‍ಟಿ ಅಭಿವೃದ್ದಿಗೆ ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಬಳಕೆಯಾಗಲಿ : ನರೇಂದ್ರಸ್ವಾಮಿ

ಬಾಗಲಕೋಟೆ: ಶೋಷಿತ ವರ್ಗಗಳ ಅಭಿವೃದ್ದಿಗೆ ಸರಕಾರ ಮೀಸಲಿಟ್ಟ ಅನುದಾನವನ್ನು SC ST grants ಸಮರ್ಪಕವಾಗಿ ಬಳಕೆಯಾಗಬೇಕೆಂದು ಕರ್ನಾಟಕ ವಿಧಾನ ಮಂಡಳದ ಅನುಸೂಚಿತ ರಾಜಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಶುಕ್ರವಾರ ಬಾಗಲಕೋಟೆ ಜಿಲ್ಲೆಗೆ ಸಂಬಂಧಿಸಿದಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ದಿಗಾಗಿ SC ST grants ಹಮ್ಮಿಕೊಳ್ಳಲಾದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶೋಷಿತ ವರ್ಗಗಳಿಗೆ ವಿವಿಧ ಇಲಾಖೆಗಳಲ್ಲಿ ಮೀಸಲಿಟ್ಟ ಅನುದಾನ ಬಳಕೆ ಆಗಬೇಕು. ಲೋಪವಾದಲ್ಲಿ ಕ್ರಮಕೈಗೊಳ್ಳಲಾಗುವುದ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: Vijayapura News | SC-ST ಪಂಗಡಗಳ ಕಲ್ಯಾಣ ಸಮಿತಿಯಿಂದ ಜಿಲ್ಲೆಯ ಪ್ರಗತಿ ಪರಿಶೀಲನೆ | ಸಾಮಾಜಿಕ ಕಾಳಜಿಯೊಂದಿಗೆ ಕಾರ್ಯನಿರ್ವಹಿಸಿ ನೈಜ ಫಲಾನುಭವಿಗಳಿಗೆ ಲಾಭ ದೊರಕಿಸಿ

ಕಳೆದ 2013ರಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಪ್ರತ್ಯೇಕ ಕಾಯ್ದೆ ಜಾರಿಗೊಳಿಸಲಾಗಿದೆ. ಸಾಮಾಜಿಕ ಅಸಮಾನತೆ ಎಂಬುದು ಸಮಾಜಕ್ಕೆ ಅಂಟಿದ ಪಿಡುಗಾಗಿದ್ದು, ಇದನ್ನು ಹೋಗಲಾಡಿಸಲು ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ಮಾಡಬೇಕಿದೆ. ಶೋಷಿತ ವರ್ಗದವ ಅಭಿವೃದ್ದಿಗೆ ಯಾವ ರೀತಿ ಯೋಜನೆ ನಿರ್ಮಿಸಿ ಅವರನ್ನು ಮೇಲೆತ್ತುವ ಕೆಲಸವನ್ನು ಅಧಿಕಾರಿ ವರ್ಗದವರು ಮಾಡಬೇಕಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳುವ ಮೂಲಕ ಸಮುದಾಯಗಳ ಬಲವರ್ಧನೆಗೆ ಮುಂದಾಗಬೇಕು ಎಂದು ತಿಳಿಸಿದರು.

ಸಮಾಜಕ್ಕೆ ಮಾರಕವಾಗಿರುವ ದೇವದಾಸಿ ಪದ್ದತಿ ನಿರ್ಮೂಲನೆಗೆ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇವದಾಸಿ ಪುನರ್ವಸತಿ ಯೋಜನೆಯಡಿ 4 ಸಾವಿರ ದೇವದಾಸಿ ಮಹಿಳೆಯರಿಗೆ ಇನ್ನು ಸೂರು ದೊರೆಯದಿರುವ ಮಾಹಿತಿ ತಿಳಿಸಿದ ಅಧ್ಯಕ್ಷರು ಅಸಮಾಧಾನ ವ್ಯಕ್ತಿಪಡಿಸಿ ಆದ್ಯತೆ ಮೇರೆಗೆ ಪ್ರತಿಯೊಬ್ಬರಿಗೂ ಇನ್ನು ಎರಡು ತಿಂಗಳಲ್ಲಿ ಸಂಬಂಧ ಪಟ್ಟ ಅಧಿಕಾರಿಗಳು ಸೂರು ಕಲ್ಪಸಲು ಕ್ರಮಕೈಗೊಳ್ಳಬೇಕು. ಸಾಮಾಜಿಕ ಜವಾಬ್ದಾರಿ ಸರಕಾರದ ಬದ್ದತೆಯಿಂದ ಕೆಲಸ ನಿರ್ವಹಿಸಬೇಕು. ಇಲ್ಲದಿದ್ದರೆ ಕಾನೂನು ರೀತಿಯಲ್ಲಿ ಕ್ರಮವಹಿಸಲಾಗುವುದೆಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡುವದರ ಜೊತೆಗೆ ಎರಡು ತಿಂಗಳು ಬಿಟ್ಟಿ ಜಿಲ್ಲೆಗೆ ಬರುವುದಾಗಿ ತಿಳಿಸಿದರು.

ಇದನ್ನೂ ಓದಿ: Vijayapura News | ನವೆಂಬರ್ 17 ರಂದು ಸಂಘ ದಾನ ಪುಣ್ಯ ಪೂಜಾ ಮಹೋತ್ಸವ ಧಮ್ಮ ಕಾರ್ಯಕ್ರಮ

ಕೇಂದ್ರ ಹಾಗೂ ರಾಜ್ಯ ಪುರಷ್ಕøತ ಯೋಜನೆಯಾದ ಜಲಜೀವನ ಮಿಷನ ಯೋಜನೆಯಡಿ ಗ್ರಾಮೀಣ ಭಾಗದ ಪ್ರತಿಯೊಂದು ಮನೆಗಳಿಗೆ ನಲ್ಲಿ ಸಂಪರ್ಕ ನೀಡುವ ನೀಡಬೇಕಾಗಿದೆ. ಜಿಲ್ಲೆಯಲ್ಲಿ 4 ಹಂತದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ ಆದರೆ ಕಾಮಗಾರಿ ಗುಣಮಟ್ಟವಾಗಿರುವ ಬಗ್ಗೆ ಪರಿಶೀಲನೆ ನಡೆದಿದೆಯೇ, ಕಾಮಗಾರಿಯಲ್ಲಿ ಗುಣಮಟ್ಟದ ಪೈಪ್ ಹಾಕಿದ್ದಾರೆ ಕೇಳಿದರು. ಅಲ್ಲದೇ ವಿವಿಧ ರೀತಿಯ ಪೈಪ್‍ಗಳ ದರವನ್ನು ತಿಳಿಯದ ಅಭಿಯಂತರರು ಕಾಮಗಾರಿ ಗುಣಮಟ್ಟ ಪರಿಶೀಲಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಈ ಯೋಜನೆ 30 ವರ್ಷದ್ದಾಗಿದ್ದು, ಕಳಪೆ ಗುಣಮಟ್ಟದ ಪೈಪಲೈನ್ ಹಾಕಿದ್ದರೆ ಬಾಳಿಕೆ ಬರುತ್ತದೆ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದರು.

ಪ್ಯಾಕೇಜ್ ಟೆಂಡರ್ ಸಿಸ್ಟಮ್ ಆಗದಂತೆ ನೋಡಿಕೊಳ್ಳಲು ಕೆಬಿಜೆಎನ್‍ಎಲ್‍ಗೆ ತಿಳಿಸಿದರು. ವಿವಿಧ ಕಾಮಗಾರಿಗಳನ್ನು ಒಂದೇ ಟೆಂಡರ್‍ನಲ್ಲಿ ಕರೆದರೆ ಎಸ್‍ಸಿ, ಎಸ್.ಟಿ ಸಮುದಾಯಕ್ಕೆ ನೀಡಬೇಕಾದ ಟೆಂಡರ್ ಕೈತಪ್ಪಿಹೋಗುತ್ತಿವೆ. ಹಾಗಾಗದಂತೆ ಜಿಲ್ಲಾಡಳಿತ ನಿಗಾವಹಿಸಲು ತಿಳಿಸಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಶಾಲೆಗೆ ಸಂಬಂದಿಸಿದ ಕೌಂಪೌಂಡ್, ಆಟದ ಮೈದಾನ, ಬಿಡಿ ಊಟದ ಕೋಣೆ ನಿರ್ಮಾಣ ಮಾಡಲಾಗುತ್ತಿದೆ. ಸ್ವಚ್ಛಭಾರತ ಮಿಷಯ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪಂಗಡ ಕುಟುಂಬಗಳಿಗೆ ವೈಯಕ್ತಿಕ ಶೌಚಾಲಯ ಹಾಗೂ ಜಾಗ ಇಲ್ಲದವರಿಗೆ ಸಮುದಾಯ ಶೌಚಾಲಯ ನಿರ್ಮಿಸಿಕೊಡಲಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಸಭೆಗೆ ತಿಳಿಸಿದರು.

ಇದನ್ನೂ ಓದಿ: Vijayapura News | ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತ್ – ಶಿವಾಜಿ ಅನಂತ ನಲವಾಡೆ

ಸಭೆಯಲ್ಲಿ ಸಮಿತಿಯ ಅಧಿನ ಕಾರ್ಯದರ್ಶಿ ಸೀನು, ಸದ್ಯರಾದ ಶಾಂತಾರಾಮ ಬುದ್ನಿ ಸಿದ್ದಿ, ಕೃಷ್ಣಾ ನಾಯ್ಕ ಕೆ, ಡಾ.ಎಂ.ಚಂದ್ರಪ್ಪ, ಎನ್.ರವಿಕುಮಾರ, ದುರ್ಯೋದನ ಎಂ. ಐಹೊಳೆ, ಬಸವರಾಜ ಮತ್ತಿಮುಡ, ರಾಜೇಂದ್ರ ರಾಜಣ್ಣ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿ.ಪಂ ಸಿಇಓ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಉಪವಿಭಾಗಾಧಿಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Share the Post:

ಇತ್ತೀಚಿನ ಸುದ್ದಿಗಳು