ಬಸವನ ಬಾಗೇವಾಡಿ ಸರಕಾರಿ ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ; ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ

ವಿಜಯಪುರ: ಬರದ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿಯ ಹಿರಿಮೆ ಸಿಕ್ಕಿದೆ. ಹೌದು! 2020-21ನೇ ಸಾಲಿನಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಸ್ವಚ್ಚತೆ, ಶುಚಿತ್ವ ಮತ್ತು ನೈರ್ಮಲ್ಯಕ್ಕಾಗಿ ನೀಡುವ ಕಾಯಕಲ್ಪ ಪ್ರಶಸ್ತಿಯು ವಿಜಯಪುರ ಜಿಲ್ಲೆಯ 20 ಆರೋಗ್ಯ ಸಂಸ್ಥೆಗಳಿಗೆ ಲಭಿಸಿರುತ್ತದೆ. ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡುವ ಆಸ್ಪತ್ರೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಕಾಯಕಲ್ಪ ಪ್ರಶಸ್ತಿಯನ್ನು 2015 ರಿಂದ ನೀಡಲಾಗುತ್ತ್ತಿದೆ. 2019-20ನೇ ಸಾಲಿನಲ್ಲಿ ಜಿಲ್ಲೆಯ 15 ಆರೋಗ್ಯ ಸಂಸ್ಥೆಗಳು ಕಾಯಕಲ್ಪ ಪ್ರಶಸ್ತಿಯನ್ನು ಪಡೆದಿದ್ದರೆ, 2020-21ನೇ ಸಾಲಿನಲ್ಲಿ ಒಟ್ಟು 20 […]